ತಿರುಪತಿ:- ಆಂಧ್ರದಲ್ಲಿ ಎತೇಚ್ಚವಾಗಿ ಕರ್ನಾಟಕದ ಮದ್ಯದ ಸರಕು ವ್ಯಾಪಾರವಾಗುತ್ತಿದೆ ಖಚಿತ ಮಾಹಿತಿ ಮೇರೆಗೆ ತಂಬಾಕು ಉತ್ಪನ್ನಗಳನ್ನು ಹಿಡಿಯುವ ಸಲುವಾಗಿ ತಿರುಪತಿಯ ಮನೆಯೊಂದರ ಮೇಲೆ ದಾಳಿ ನಡೆಸಿರುವ ತಿರುಪತಿ ಅಪರಾಧ ವಿಭಾಗದ ಪೋಲಿಸರಿಗೆ ಅಲ್ಲಿ ಕರ್ನಾಟಕದ ಮದ್ಯದ ಬಾಟಿಲ್ ಗಳು ಇದ್ದು ಅದನ್ನು ವಶಪಡಿಸಿಕೊಂಡಿದ್ದಾರೆ. ಒರ್ವ ಆರೋಪಿಯನ್ನು ಬಂಧಿಸಲಾಗಿದೆ. ಪೂರ್ವ ಸಿಐ ಶಿವಪ್ರಸಾದ್ ರೆಡ್ಡಿ ಅವರ ಪ್ರಕಾರ, ತಿರುಪತಿ ನಗರದ ಪಿಕೆ ಲೇಟ್ ನಿವಾಸಿ ಕೇಶವ್, ಕರ್ನಾಟಕ ಮದ್ಯದ ಜೊತೆಗೆ ಅಕ್ರಮ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದು ಗುರುವಾರ ರಾತ್ರಿ ಅವರ ಮನೆಯ ಮೇಲೆ ದಾಳಿ ನಡೆಸಿ ಅಕ್ರಮ ತಂಬಾಕು ಉತ್ಪನ್ನಗಳ ಜೊತೆಗೆ 15 ಸಾವಿರ ಮೌಲ್ಯದ 78 ಕರ್ನಾಟಕದ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ ರಾಯಲ್ಪಾಡಿನಿಂದ ಮದ್ಯದ ಬಾಟಿಲಗಳನ್ನು ತಂದು ಕಲಿಕಿರಿ ಮಂಡಲ ಕಾಲೋನಿ ಬಳಿಯ ಅಕುಲ ಗುಟ್ಟಾದಲ್ಲಿ ಮಾರಾಟ ಮಾಡುತ್ತಿದ್ದಾಗ ಕಲಿಕಿರಿಯ ಇಂದಿರಾಮ್ಮ ಕಾಲೋನಿ ನಿವಾಸಿ ಟಿ.ಕುಮಾರಸ್ವಾಮಿ ಅವರನ್ನು ಪೊಲೀಸರು ಬಂಧಿಸಿ, ಅವರಿಂದ 20 ಬಾಟಲಿಗಳ ಮದ್ಯವನ್ನು ವಶಪಡಿಸಿಕೊಂಡು ರಿಮ್ಯಾಂಡ್ ಗೆ ಕಳಿಸಿರುವುದಾಗಿ ಸ್ಥಳೀಯ ಎಸ್ಐ ಲೋಕೇಶ್ ರೆಡ್ಡಿ ತಿಳಿಸಿದ್ದಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Sunday, June 15