ತಿರುಪತಿ:- ಆಂಧ್ರದಲ್ಲಿ ಎತೇಚ್ಚವಾಗಿ ಕರ್ನಾಟಕದ ಮದ್ಯದ ಸರಕು ವ್ಯಾಪಾರವಾಗುತ್ತಿದೆ ಖಚಿತ ಮಾಹಿತಿ ಮೇರೆಗೆ ತಂಬಾಕು ಉತ್ಪನ್ನಗಳನ್ನು ಹಿಡಿಯುವ ಸಲುವಾಗಿ ತಿರುಪತಿಯ ಮನೆಯೊಂದರ ಮೇಲೆ ದಾಳಿ ನಡೆಸಿರುವ ತಿರುಪತಿ ಅಪರಾಧ ವಿಭಾಗದ ಪೋಲಿಸರಿಗೆ ಅಲ್ಲಿ ಕರ್ನಾಟಕದ ಮದ್ಯದ ಬಾಟಿಲ್ ಗಳು ಇದ್ದು ಅದನ್ನು ವಶಪಡಿಸಿಕೊಂಡಿದ್ದಾರೆ. ಒರ್ವ ಆರೋಪಿಯನ್ನು ಬಂಧಿಸಲಾಗಿದೆ. ಪೂರ್ವ ಸಿಐ ಶಿವಪ್ರಸಾದ್ ರೆಡ್ಡಿ ಅವರ ಪ್ರಕಾರ, ತಿರುಪತಿ ನಗರದ ಪಿಕೆ ಲೇಟ್ ನಿವಾಸಿ ಕೇಶವ್, ಕರ್ನಾಟಕ ಮದ್ಯದ ಜೊತೆಗೆ ಅಕ್ರಮ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದು ಗುರುವಾರ ರಾತ್ರಿ ಅವರ ಮನೆಯ ಮೇಲೆ ದಾಳಿ ನಡೆಸಿ ಅಕ್ರಮ ತಂಬಾಕು ಉತ್ಪನ್ನಗಳ ಜೊತೆಗೆ 15 ಸಾವಿರ ಮೌಲ್ಯದ 78 ಕರ್ನಾಟಕದ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ ರಾಯಲ್ಪಾಡಿನಿಂದ ಮದ್ಯದ ಬಾಟಿಲಗಳನ್ನು ತಂದು ಕಲಿಕಿರಿ ಮಂಡಲ ಕಾಲೋನಿ ಬಳಿಯ ಅಕುಲ ಗುಟ್ಟಾದಲ್ಲಿ ಮಾರಾಟ ಮಾಡುತ್ತಿದ್ದಾಗ ಕಲಿಕಿರಿಯ ಇಂದಿರಾಮ್ಮ ಕಾಲೋನಿ ನಿವಾಸಿ ಟಿ.ಕುಮಾರಸ್ವಾಮಿ ಅವರನ್ನು ಪೊಲೀಸರು ಬಂಧಿಸಿ, ಅವರಿಂದ 20 ಬಾಟಲಿಗಳ ಮದ್ಯವನ್ನು ವಶಪಡಿಸಿಕೊಂಡು ರಿಮ್ಯಾಂಡ್ ಗೆ ಕಳಿಸಿರುವುದಾಗಿ ಸ್ಥಳೀಯ ಎಸ್ಐ ಲೋಕೇಶ್ ರೆಡ್ಡಿ ತಿಳಿಸಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



