ತಿರುಪತಿ:- ಆಂಧ್ರದಲ್ಲಿ ಎತೇಚ್ಚವಾಗಿ ಕರ್ನಾಟಕದ ಮದ್ಯದ ಸರಕು ವ್ಯಾಪಾರವಾಗುತ್ತಿದೆ ಖಚಿತ ಮಾಹಿತಿ ಮೇರೆಗೆ ತಂಬಾಕು ಉತ್ಪನ್ನಗಳನ್ನು ಹಿಡಿಯುವ ಸಲುವಾಗಿ ತಿರುಪತಿಯ ಮನೆಯೊಂದರ ಮೇಲೆ ದಾಳಿ ನಡೆಸಿರುವ ತಿರುಪತಿ ಅಪರಾಧ ವಿಭಾಗದ ಪೋಲಿಸರಿಗೆ ಅಲ್ಲಿ ಕರ್ನಾಟಕದ ಮದ್ಯದ ಬಾಟಿಲ್ ಗಳು ಇದ್ದು ಅದನ್ನು ವಶಪಡಿಸಿಕೊಂಡಿದ್ದಾರೆ. ಒರ್ವ ಆರೋಪಿಯನ್ನು ಬಂಧಿಸಲಾಗಿದೆ. ಪೂರ್ವ ಸಿಐ ಶಿವಪ್ರಸಾದ್ ರೆಡ್ಡಿ ಅವರ ಪ್ರಕಾರ, ತಿರುಪತಿ ನಗರದ ಪಿಕೆ ಲೇಟ್ ನಿವಾಸಿ ಕೇಶವ್, ಕರ್ನಾಟಕ ಮದ್ಯದ ಜೊತೆಗೆ ಅಕ್ರಮ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದು ಗುರುವಾರ ರಾತ್ರಿ ಅವರ ಮನೆಯ ಮೇಲೆ ದಾಳಿ ನಡೆಸಿ ಅಕ್ರಮ ತಂಬಾಕು ಉತ್ಪನ್ನಗಳ ಜೊತೆಗೆ 15 ಸಾವಿರ ಮೌಲ್ಯದ 78 ಕರ್ನಾಟಕದ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ ರಾಯಲ್ಪಾಡಿನಿಂದ ಮದ್ಯದ ಬಾಟಿಲಗಳನ್ನು ತಂದು ಕಲಿಕಿರಿ ಮಂಡಲ ಕಾಲೋನಿ ಬಳಿಯ ಅಕುಲ ಗುಟ್ಟಾದಲ್ಲಿ ಮಾರಾಟ ಮಾಡುತ್ತಿದ್ದಾಗ ಕಲಿಕಿರಿಯ ಇಂದಿರಾಮ್ಮ ಕಾಲೋನಿ ನಿವಾಸಿ ಟಿ.ಕುಮಾರಸ್ವಾಮಿ ಅವರನ್ನು ಪೊಲೀಸರು ಬಂಧಿಸಿ, ಅವರಿಂದ 20 ಬಾಟಲಿಗಳ ಮದ್ಯವನ್ನು ವಶಪಡಿಸಿಕೊಂಡು ರಿಮ್ಯಾಂಡ್ ಗೆ ಕಳಿಸಿರುವುದಾಗಿ ಸ್ಥಳೀಯ ಎಸ್ಐ ಲೋಕೇಶ್ ರೆಡ್ಡಿ ತಿಳಿಸಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



