ತಿರುಪತಿ:- ಆಂಧ್ರದಲ್ಲಿ ಎತೇಚ್ಚವಾಗಿ ಕರ್ನಾಟಕದ ಮದ್ಯದ ಸರಕು ವ್ಯಾಪಾರವಾಗುತ್ತಿದೆ ಖಚಿತ ಮಾಹಿತಿ ಮೇರೆಗೆ ತಂಬಾಕು ಉತ್ಪನ್ನಗಳನ್ನು ಹಿಡಿಯುವ ಸಲುವಾಗಿ ತಿರುಪತಿಯ ಮನೆಯೊಂದರ ಮೇಲೆ ದಾಳಿ ನಡೆಸಿರುವ ತಿರುಪತಿ ಅಪರಾಧ ವಿಭಾಗದ ಪೋಲಿಸರಿಗೆ ಅಲ್ಲಿ ಕರ್ನಾಟಕದ ಮದ್ಯದ ಬಾಟಿಲ್ ಗಳು ಇದ್ದು ಅದನ್ನು ವಶಪಡಿಸಿಕೊಂಡಿದ್ದಾರೆ. ಒರ್ವ ಆರೋಪಿಯನ್ನು ಬಂಧಿಸಲಾಗಿದೆ. ಪೂರ್ವ ಸಿಐ ಶಿವಪ್ರಸಾದ್ ರೆಡ್ಡಿ ಅವರ ಪ್ರಕಾರ, ತಿರುಪತಿ ನಗರದ ಪಿಕೆ ಲೇಟ್ ನಿವಾಸಿ ಕೇಶವ್, ಕರ್ನಾಟಕ ಮದ್ಯದ ಜೊತೆಗೆ ಅಕ್ರಮ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದು ಗುರುವಾರ ರಾತ್ರಿ ಅವರ ಮನೆಯ ಮೇಲೆ ದಾಳಿ ನಡೆಸಿ ಅಕ್ರಮ ತಂಬಾಕು ಉತ್ಪನ್ನಗಳ ಜೊತೆಗೆ 15 ಸಾವಿರ ಮೌಲ್ಯದ 78 ಕರ್ನಾಟಕದ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ ರಾಯಲ್ಪಾಡಿನಿಂದ ಮದ್ಯದ ಬಾಟಿಲಗಳನ್ನು ತಂದು ಕಲಿಕಿರಿ ಮಂಡಲ ಕಾಲೋನಿ ಬಳಿಯ ಅಕುಲ ಗುಟ್ಟಾದಲ್ಲಿ ಮಾರಾಟ ಮಾಡುತ್ತಿದ್ದಾಗ ಕಲಿಕಿರಿಯ ಇಂದಿರಾಮ್ಮ ಕಾಲೋನಿ ನಿವಾಸಿ ಟಿ.ಕುಮಾರಸ್ವಾಮಿ ಅವರನ್ನು ಪೊಲೀಸರು ಬಂಧಿಸಿ, ಅವರಿಂದ 20 ಬಾಟಲಿಗಳ ಮದ್ಯವನ್ನು ವಶಪಡಿಸಿಕೊಂಡು ರಿಮ್ಯಾಂಡ್ ಗೆ ಕಳಿಸಿರುವುದಾಗಿ ಸ್ಥಳೀಯ ಎಸ್ಐ ಲೋಕೇಶ್ ರೆಡ್ಡಿ ತಿಳಿಸಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



