ತಿರುಪತಿ:- ಆಂಧ್ರದಲ್ಲಿ ಎತೇಚ್ಚವಾಗಿ ಕರ್ನಾಟಕದ ಮದ್ಯದ ಸರಕು ವ್ಯಾಪಾರವಾಗುತ್ತಿದೆ ಖಚಿತ ಮಾಹಿತಿ ಮೇರೆಗೆ ತಂಬಾಕು ಉತ್ಪನ್ನಗಳನ್ನು ಹಿಡಿಯುವ ಸಲುವಾಗಿ ತಿರುಪತಿಯ ಮನೆಯೊಂದರ ಮೇಲೆ ದಾಳಿ ನಡೆಸಿರುವ ತಿರುಪತಿ ಅಪರಾಧ ವಿಭಾಗದ ಪೋಲಿಸರಿಗೆ ಅಲ್ಲಿ ಕರ್ನಾಟಕದ ಮದ್ಯದ ಬಾಟಿಲ್ ಗಳು ಇದ್ದು ಅದನ್ನು ವಶಪಡಿಸಿಕೊಂಡಿದ್ದಾರೆ. ಒರ್ವ ಆರೋಪಿಯನ್ನು ಬಂಧಿಸಲಾಗಿದೆ. ಪೂರ್ವ ಸಿಐ ಶಿವಪ್ರಸಾದ್ ರೆಡ್ಡಿ ಅವರ ಪ್ರಕಾರ, ತಿರುಪತಿ ನಗರದ ಪಿಕೆ ಲೇಟ್ ನಿವಾಸಿ ಕೇಶವ್, ಕರ್ನಾಟಕ ಮದ್ಯದ ಜೊತೆಗೆ ಅಕ್ರಮ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದು ಗುರುವಾರ ರಾತ್ರಿ ಅವರ ಮನೆಯ ಮೇಲೆ ದಾಳಿ ನಡೆಸಿ ಅಕ್ರಮ ತಂಬಾಕು ಉತ್ಪನ್ನಗಳ ಜೊತೆಗೆ 15 ಸಾವಿರ ಮೌಲ್ಯದ 78 ಕರ್ನಾಟಕದ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ ರಾಯಲ್ಪಾಡಿನಿಂದ ಮದ್ಯದ ಬಾಟಿಲಗಳನ್ನು ತಂದು ಕಲಿಕಿರಿ ಮಂಡಲ ಕಾಲೋನಿ ಬಳಿಯ ಅಕುಲ ಗುಟ್ಟಾದಲ್ಲಿ ಮಾರಾಟ ಮಾಡುತ್ತಿದ್ದಾಗ ಕಲಿಕಿರಿಯ ಇಂದಿರಾಮ್ಮ ಕಾಲೋನಿ ನಿವಾಸಿ ಟಿ.ಕುಮಾರಸ್ವಾಮಿ ಅವರನ್ನು ಪೊಲೀಸರು ಬಂಧಿಸಿ, ಅವರಿಂದ 20 ಬಾಟಲಿಗಳ ಮದ್ಯವನ್ನು ವಶಪಡಿಸಿಕೊಂಡು ರಿಮ್ಯಾಂಡ್ ಗೆ ಕಳಿಸಿರುವುದಾಗಿ ಸ್ಥಳೀಯ ಎಸ್ಐ ಲೋಕೇಶ್ ರೆಡ್ಡಿ ತಿಳಿಸಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



