ತಿರುಪತಿ:- ಆಂಧ್ರದಲ್ಲಿ ಎತೇಚ್ಚವಾಗಿ ಕರ್ನಾಟಕದ ಮದ್ಯದ ಸರಕು ವ್ಯಾಪಾರವಾಗುತ್ತಿದೆ ಖಚಿತ ಮಾಹಿತಿ ಮೇರೆಗೆ ತಂಬಾಕು ಉತ್ಪನ್ನಗಳನ್ನು ಹಿಡಿಯುವ ಸಲುವಾಗಿ ತಿರುಪತಿಯ ಮನೆಯೊಂದರ ಮೇಲೆ ದಾಳಿ ನಡೆಸಿರುವ ತಿರುಪತಿ ಅಪರಾಧ ವಿಭಾಗದ ಪೋಲಿಸರಿಗೆ ಅಲ್ಲಿ ಕರ್ನಾಟಕದ ಮದ್ಯದ ಬಾಟಿಲ್ ಗಳು ಇದ್ದು ಅದನ್ನು ವಶಪಡಿಸಿಕೊಂಡಿದ್ದಾರೆ. ಒರ್ವ ಆರೋಪಿಯನ್ನು ಬಂಧಿಸಲಾಗಿದೆ. ಪೂರ್ವ ಸಿಐ ಶಿವಪ್ರಸಾದ್ ರೆಡ್ಡಿ ಅವರ ಪ್ರಕಾರ, ತಿರುಪತಿ ನಗರದ ಪಿಕೆ ಲೇಟ್ ನಿವಾಸಿ ಕೇಶವ್, ಕರ್ನಾಟಕ ಮದ್ಯದ ಜೊತೆಗೆ ಅಕ್ರಮ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದು ಗುರುವಾರ ರಾತ್ರಿ ಅವರ ಮನೆಯ ಮೇಲೆ ದಾಳಿ ನಡೆಸಿ ಅಕ್ರಮ ತಂಬಾಕು ಉತ್ಪನ್ನಗಳ ಜೊತೆಗೆ 15 ಸಾವಿರ ಮೌಲ್ಯದ 78 ಕರ್ನಾಟಕದ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ ರಾಯಲ್ಪಾಡಿನಿಂದ ಮದ್ಯದ ಬಾಟಿಲಗಳನ್ನು ತಂದು ಕಲಿಕಿರಿ ಮಂಡಲ ಕಾಲೋನಿ ಬಳಿಯ ಅಕುಲ ಗುಟ್ಟಾದಲ್ಲಿ ಮಾರಾಟ ಮಾಡುತ್ತಿದ್ದಾಗ ಕಲಿಕಿರಿಯ ಇಂದಿರಾಮ್ಮ ಕಾಲೋನಿ ನಿವಾಸಿ ಟಿ.ಕುಮಾರಸ್ವಾಮಿ ಅವರನ್ನು ಪೊಲೀಸರು ಬಂಧಿಸಿ, ಅವರಿಂದ 20 ಬಾಟಲಿಗಳ ಮದ್ಯವನ್ನು ವಶಪಡಿಸಿಕೊಂಡು ರಿಮ್ಯಾಂಡ್ ಗೆ ಕಳಿಸಿರುವುದಾಗಿ ಸ್ಥಳೀಯ ಎಸ್ಐ ಲೋಕೇಶ್ ರೆಡ್ಡಿ ತಿಳಿಸಿದ್ದಾರೆ.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27