ಶ್ರೀನಿವಾಸಪುರ:ಕೆಸಿ ವ್ಯಾಲಿ ನೀರನ್ನು ಕೋಲಾರ ಜಿಲ್ಲೆಗೆ ಕೊಡಲೆ ಬೇಕು ಎಂದು ಇದ್ದರೆ ಪರಿಣಾಮಕಾರಿಯಾಗಿ ಮೂರನೆ ಹಂತದ ಶುದ್ಧೀಕರಣ ಮಾಡಿ ಹರಿಸುವ ಮೂಲಕ ಈ ಭಾಗದ ಜನರಿಗೆ ಅಗಿರುವಂತ ಅನ್ಯಾಯವನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸರಿಪಡಿಲಾಗುವುದು ಸಾದ್ಯವಾಗದಿದ್ದರೆ ಕೆಸಿ ವ್ಯಾಲಿ ಯೋಜನೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು ಅವರು ತಾಲೂಕಿನ ನಕ್ಕಲಗಡ್ದ ಗ್ರಾಮದಲ್ಲಿ ಗ್ರಾಮವಾಸ್ತವ್ಯ ಮಾಡಿದ್ದು ಗ್ರಾಮಕ್ಕೆ ಹೋದಾಗ ತಡರಾತ್ರಿ 2 ಗಂಟೆಯಾಗಿದ್ದು ಮತ್ತು ಮಳೆ ಹಿನ್ನಲೆಯಲ್ಲಿ ಮರುದಿನ ಬುಧವಾರ ಮುಂಜಾನೆ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆಸಿ ವ್ಯಾಸಿ ಯೋಜನೆಯ ಎರಡನೆ ಹಂತದ ನೀರು ಶುದ್ಧೀಕರಣದ ಯಂತ್ರಗಳು ಕೆಟ್ಟು ನಿಂತಿದ್ದು ಬೆಂಗಳೂರಿನಿಂದ ನೀರು ನೇರವಾಗಿ ಹರಿದು ಬರುತ್ತಿದೆ ಬಿಜೆಪಿ ವಿರುದ್ದ 40 ಪರ್ಸಂಟೆಜ್ ಆರೋಪ ಮಾಡುವವರು ಈ ಯೋಜನೆಯಲ್ಲಿ ಎನೆಲ್ಲಾ ಅಕ್ರಮಗಳು ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದು ಮಾರ್ಮಿಕವಾಗಿ ಹೇಳಿದರು.
ಬಿಜೆಪಿ ಸರ್ಕಾರಗಳ ವಿರುದ್ದ ತೀವ್ರವಾಗಿ ವಾಗ್ದಾಳಿ
ನೆಲ ಜಲ ಸಂರಕ್ಷಣೆಯಲ್ಲಿ ಡಬಲ್ ಇಂಜಿನ್ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಸರ್ಕಾರಗಳ ವಿರುದ್ದ ತೀವ್ರವಾಗಿ ವಾಗ್ದಾಳಿ ನಡೆಸಿದರು ರಾಜ್ಯದ ನೆಲ ಜಲ ಸಂರಕ್ಷಣೆಯಲ್ಲಿ ಡಬಲ್ ಇಂಜಿನ್ ಸರ್ಕಾರ ವಿಫಲವಾಗಿದೆ
ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಸಾಧ್ಯವಿಲ್ಲ ಎಂದ ಅವರು ಬಿಜೆಪಿ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಎಸಗುತ್ತಿದೆ ಎಂದರು.
ಯಾರದೋ ಅನಕೂಲಕ್ಕಾಗಿ ಕೋಲಾರಕ್ಕೆ ಯಾರನ್ನೆ ಕರೆತಂದು ನಿಲ್ಲಿಸಿದರು ಕೋಲಾರ ಜಿಲ್ಲೆಯ ಐದು ಕ್ಷೇತ್ರಗಳಲ್ಲೂ ನಮ್ಮ ಪಕ್ಷ ಬಲಿಷ್ಠವಾಗಿದೆ ಜನತೆ ಜೆಡಿಎಸ್ ಗೆಲ್ಲಿಸಬೇಕು ಎಂಬ ಹುಮ್ಮಸ್ಸಿನಲ್ಲಿದ್ದಾರೆ, ಕೋಲಾರ-ಚಿಕ್ಕಬಳ್ಳಾಪುರ ಎರಡು ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ 10 ರಿಂದ 15 ಕ್ಷೇತ್ರಗಳಲ್ಲಿ ಮಹಿಳೆಯರು ಸ್ಪರ್ದಿಸಲು ಅವಕಾಶ ಕಲ್ಪಿಸುವುದಾಗಿ ಹೇಳಿದರು.
ಇವರೊಂದಿಗೆ ಚಿಂತಾಮಣಿ ಶಾಸಕ ಕೃಷ್ಣಾರೆಡ್ದಿ,ಮಾಜಿ ಶಾಸಕ ವೆಂಕಟಶಿವಾರೆಡ್ದಿ,ವಿಧಾನಪರಿಷತ್ ಸದಸ್ಯ ಇಂಚರಗೋವಿಂದರಾಜು,ಮಾಜಿ ಸದಸ್ಯ ಪಲ್ಲಿಚೌಡರೆಡ್ಡಿ,ಸಮೃದ್ದಿ ಮಂಜುನಾಥ್,ಭಿಮಗುಂಟಪಲ್ಲಿ ಶಿವಾರೆಡ್ದಿ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



