ಶ್ರೀನಿವಾಸಪುರ: ತಾಲ್ಲೂಕಿನ ಕಸಬಾ ಹೋಬಳಿ ಕಿರುವಾರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಕೋದಂಡರಾಮ ದೇವರ ದೇವಾಲಯ ಪುನರ್ ಬಿಂಬ ಪ್ರತಿಷ್ಠಾಪನೆ ಕಾರ್ಯಕ್ರಮ ಮಾ.20 ಮತ್ತು ಮಾ21 ರಂದು ಭಾನುವಾರ ಹಾಗು ಸೋಮವಾರ ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಶ್ರೀಗಣಪತಿ, ಶ್ರೀ ಸುಬ್ರಹ್ಮಣ್ಯಸ್ವಾಮಿ ಸೇರಿದಂತೆ ಪರಿವಾರ ಸಮೇತ ಶ್ರೀ ಕೋದಂಡರಾಮ ದೇವರುಗಳ ಸ್ಥಿರಬಿಂಬ ಪ್ರತಿಷ್ಠಾಪನಾ ಕಾರ್ಯಕ್ರಮ ಗ್ರಾಮ ದೇವತೆ ಅನುಗ್ರಹದೊಂದಿಗೆ ಮಾ.20ರಂದು ಭಾನುವಾರ ಸಂಜೆ ಪ್ರಾರಂಭವಾಗಲಿದ್ದು ಮಾ21 ರಂದು ಸೋಮವಾರದ ವರಿಗೂ ನಡೆಯುತ್ತವೆ ಭಾನುವಾರ ಗಣಪತಿ ಪೂಜೆ, ಪುನ್ಯಾಹವಾಚನ, ಪ್ರಾಯಶ್ಚಿತ ಸಂಕಲ್ಪ, ರಕ್ಷಾಬಂದನ, ಮೃತ್ಸಂಗ್ರಹಣ, ಅಂಕುರಾರ್ಪಣೆ, ಕಳಶಾರಾಧನೆ, ಅಗ್ನಿ ಪ್ರತಿಷ್ಟೆ ,ನಡೆಯಲಿದೆ.ಸೋಮವಾರ ಮುಂಜಾನೆ ವೇದ ಪಾರಾಯಣ, ವೇದಿಕಾರ್ಚನೆ, ಮಂತ್ರನ್ಯಾಸ, ನಾಡಿಸಂಧಾನ, ಗಣಪತಿ, ಕಳಾ ಹೋಮ, ಗೋದದರ್ಶನ, ದೇವತಾರ್ಚನೆ ನಂತರ ದೇವಾಲಯ ಲೋಕಾರ್ಪಣೆ ಆಗಲಿದೆ. ದೇವಾಲಯದ ಪೂಜಾ ಕಾರ್ಯಕ್ರಮಗಳನ್ನು ಪ್ರಧಾನ ಆರ್ಚಕರಾದ ಶ್ರೀನಿವಾಸಾಚಾರ್, ಗನಿಬಂಡೆ ಶ್ರೀನಿವಾಸ ದೇವಾಲಯದ ಖ್ಯಾತ ಅರ್ಚಕರಾದ ಶ್ರೀನಾಥ್ ಚಾರ್, ಆರಿಕುಂಟೆ ರಾಜಗೋಪಾಲಾಚಾರ್ ನಡೆಸಿಕೊಡಲಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27