ಶ್ರೀನಿವಾಸಪುರ: ತಾಲ್ಲೂಕಿನ ಕಸಬಾ ಹೋಬಳಿ ಕಿರುವಾರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಕೋದಂಡರಾಮ ದೇವರ ದೇವಾಲಯ ಪುನರ್ ಬಿಂಬ ಪ್ರತಿಷ್ಠಾಪನೆ ಕಾರ್ಯಕ್ರಮ ಮಾ.20 ಮತ್ತು ಮಾ21 ರಂದು ಭಾನುವಾರ ಹಾಗು ಸೋಮವಾರ ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಶ್ರೀಗಣಪತಿ, ಶ್ರೀ ಸುಬ್ರಹ್ಮಣ್ಯಸ್ವಾಮಿ ಸೇರಿದಂತೆ ಪರಿವಾರ ಸಮೇತ ಶ್ರೀ ಕೋದಂಡರಾಮ ದೇವರುಗಳ ಸ್ಥಿರಬಿಂಬ ಪ್ರತಿಷ್ಠಾಪನಾ ಕಾರ್ಯಕ್ರಮ ಗ್ರಾಮ ದೇವತೆ ಅನುಗ್ರಹದೊಂದಿಗೆ ಮಾ.20ರಂದು ಭಾನುವಾರ ಸಂಜೆ ಪ್ರಾರಂಭವಾಗಲಿದ್ದು ಮಾ21 ರಂದು ಸೋಮವಾರದ ವರಿಗೂ ನಡೆಯುತ್ತವೆ ಭಾನುವಾರ ಗಣಪತಿ ಪೂಜೆ, ಪುನ್ಯಾಹವಾಚನ, ಪ್ರಾಯಶ್ಚಿತ ಸಂಕಲ್ಪ, ರಕ್ಷಾಬಂದನ, ಮೃತ್ಸಂಗ್ರಹಣ, ಅಂಕುರಾರ್ಪಣೆ, ಕಳಶಾರಾಧನೆ, ಅಗ್ನಿ ಪ್ರತಿಷ್ಟೆ ,ನಡೆಯಲಿದೆ.ಸೋಮವಾರ ಮುಂಜಾನೆ ವೇದ ಪಾರಾಯಣ, ವೇದಿಕಾರ್ಚನೆ, ಮಂತ್ರನ್ಯಾಸ, ನಾಡಿಸಂಧಾನ, ಗಣಪತಿ, ಕಳಾ ಹೋಮ, ಗೋದದರ್ಶನ, ದೇವತಾರ್ಚನೆ ನಂತರ ದೇವಾಲಯ ಲೋಕಾರ್ಪಣೆ ಆಗಲಿದೆ. ದೇವಾಲಯದ ಪೂಜಾ ಕಾರ್ಯಕ್ರಮಗಳನ್ನು ಪ್ರಧಾನ ಆರ್ಚಕರಾದ ಶ್ರೀನಿವಾಸಾಚಾರ್, ಗನಿಬಂಡೆ ಶ್ರೀನಿವಾಸ ದೇವಾಲಯದ ಖ್ಯಾತ ಅರ್ಚಕರಾದ ಶ್ರೀನಾಥ್ ಚಾರ್, ಆರಿಕುಂಟೆ ರಾಜಗೋಪಾಲಾಚಾರ್ ನಡೆಸಿಕೊಡಲಿದ್ದಾರೆ.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27