ನ್ಯೂಜ್ ಡೆಸ್ಕ್:ಬಯಲು ಸೀಮೆ ಮಲೆನಾಡಿನಂತೆ ಆಗಲಿದ್ದು ಮಲೆನಾಡು ಬಯಲು ಸೀಮೆಯಂತಾಗುತ್ತೆ ಮುಂದಿನ ಸಂಕ್ರಾಂತಿ ತನಕ ಸಿದ್ಧರಾಮಯ್ಯ ಸರ್ಕಾರಕ್ಕೆ ಯಾವುದೆ ತೊಂದರೆ ಇರುವುದಿಲ್ಲ ಎಂದು ಕೋಡಿಮಠದ ಮಹಾಸ್ವಾಮೀಜಿ ಭವಿಷ್ಯ ಹೇಳಿದ್ದಾರೆ.
ಅವರು ಧಾರವಾಡದಲ್ಲಿ ದಸರಾ ಜಂಬೂ ಸವಾರಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ದಸರಾದ ನಿಜವಾದ ಅರ್ಥ ದುಷ್ಟ ಶಕ್ತಿಗಳನ್ನು ದೂರ ಮಾಡುವುದು. ಮನುಷ್ಯನ ಕೋಪ, ತಾಪ, ಆಸೆಗಳನ್ನು ಗೆಲ್ಲುವಂತೆ ಮಾಡುವುದಾಗಿದೆ. ಅಲ್ಲದೇ ಮನುಷ್ಯನಿಗೆ ಶಾಂತಿ, ಸುಖ, ನೆಮ್ಮದಿಗಾಗಿ ದಸರಾವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.
ಎರಡೂವರೆ ವರ್ಷಕ್ಕೆ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಬದಲಾವಣೆ ಆಗಲಿದ್ದಾರೆ ಎನ್ನಲಾಗುತ್ತಿದ್ದು ಇದಕ್ಕೆ ಭಿನ್ನವಾಗಿ ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದು ಸಿಎಂ ಸಿದ್ಧರಾಮಯ್ಯ ಅವರಿಗೆ, ಸಂಕ್ರಾಂತಿ ತನಕ ಯಾವುದೇ ತೊಂದರೆ ಹಾಗು ಭಯವೂ ಇಲ್ಲ. ಸಂಕ್ರಾಂತಿ ಬಳಿಕ ಆ ಬಗ್ಗೆ ಭವಿಷ್ಯ ನುಡಿಯುವುದಾಗಿ ಹೇಳಿದ್ದಾರೆ.
ಈ ಹಿಂದೆಯೇ ಹೇಳಿದಂತೆ ಬಯಲು ಸೀಮೆ ಮಲೆನಾಡು ಆಗಲಿದೆ. ಮಲೆನಾಡು ಬಯಲು ಸೀಮೆ ಆಗುತ್ತದೆ ಎಂದ ಅವರು ಬಯಲು ಸೀಮೆ ಮಲೆನಾಡು ಆಗಿದೆ ಎಂಬುದಾಗಿ ಉಚ್ಚರಿಸಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



