ನ್ಯೂಜ್ ಡೆಸ್ಕ್:ಬಯಲು ಸೀಮೆ ಮಲೆನಾಡಿನಂತೆ ಆಗಲಿದ್ದು ಮಲೆನಾಡು ಬಯಲು ಸೀಮೆಯಂತಾಗುತ್ತೆ ಮುಂದಿನ ಸಂಕ್ರಾಂತಿ ತನಕ ಸಿದ್ಧರಾಮಯ್ಯ ಸರ್ಕಾರಕ್ಕೆ ಯಾವುದೆ ತೊಂದರೆ ಇರುವುದಿಲ್ಲ ಎಂದು ಕೋಡಿಮಠದ ಮಹಾಸ್ವಾಮೀಜಿ ಭವಿಷ್ಯ ಹೇಳಿದ್ದಾರೆ.
ಅವರು ಧಾರವಾಡದಲ್ಲಿ ದಸರಾ ಜಂಬೂ ಸವಾರಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ದಸರಾದ ನಿಜವಾದ ಅರ್ಥ ದುಷ್ಟ ಶಕ್ತಿಗಳನ್ನು ದೂರ ಮಾಡುವುದು. ಮನುಷ್ಯನ ಕೋಪ, ತಾಪ, ಆಸೆಗಳನ್ನು ಗೆಲ್ಲುವಂತೆ ಮಾಡುವುದಾಗಿದೆ. ಅಲ್ಲದೇ ಮನುಷ್ಯನಿಗೆ ಶಾಂತಿ, ಸುಖ, ನೆಮ್ಮದಿಗಾಗಿ ದಸರಾವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.
ಎರಡೂವರೆ ವರ್ಷಕ್ಕೆ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಬದಲಾವಣೆ ಆಗಲಿದ್ದಾರೆ ಎನ್ನಲಾಗುತ್ತಿದ್ದು ಇದಕ್ಕೆ ಭಿನ್ನವಾಗಿ ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದು ಸಿಎಂ ಸಿದ್ಧರಾಮಯ್ಯ ಅವರಿಗೆ, ಸಂಕ್ರಾಂತಿ ತನಕ ಯಾವುದೇ ತೊಂದರೆ ಹಾಗು ಭಯವೂ ಇಲ್ಲ. ಸಂಕ್ರಾಂತಿ ಬಳಿಕ ಆ ಬಗ್ಗೆ ಭವಿಷ್ಯ ನುಡಿಯುವುದಾಗಿ ಹೇಳಿದ್ದಾರೆ.
ಈ ಹಿಂದೆಯೇ ಹೇಳಿದಂತೆ ಬಯಲು ಸೀಮೆ ಮಲೆನಾಡು ಆಗಲಿದೆ. ಮಲೆನಾಡು ಬಯಲು ಸೀಮೆ ಆಗುತ್ತದೆ ಎಂದ ಅವರು ಬಯಲು ಸೀಮೆ ಮಲೆನಾಡು ಆಗಿದೆ ಎಂಬುದಾಗಿ ಉಚ್ಚರಿಸಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



