ಶ್ರೀನಿವಾಸಪುರ:ಕೋಲಾರ,ಬೆಂಗಳೂರು ಗ್ರಾಮಾಂತರ,ಹಾಸನ, ಮಂಡ್ಯ,ತುಮಕೂರು, 5+23 ಸೀಟು ಹಂಚಿಕೆಯ ಸೂತ್ರದ ಅಡಿಯಲ್ಲಿ ವನ್ನು ಬಿಜೆಪಿ-ಜೆಡಿಎಸ್ ಮೈತ್ರಿ ಬಹುತೇಕ ಫೈನಲ್ ಎನ್ನುವ ಮಾತು ಕೇಳಿಬರುತ್ತಿದೆ.
ಜೆಡಿಎಸ್ ಭದ್ರಕೋಟೆಯಾಗಿರುವ ಕೋಲಾರ ಮೀಸಲು ಕ್ಷೇತ್ರ ಸೇರಿದಂತೆ ಮಂಡ್ಯ, ಬೆಂಗಳೂರು ಗ್ರಾಮಾಂತರ, ಹಾಸನ,ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳಲ್ಲಿ ತನ್ನ ಸಾಂಪ್ರದಾಯಿಕ ಪ್ರಾಭಲ್ಯ ಹೊಂದಿರುವ ಜೆಡಿಎಸ್ ಐದು ಕ್ಷೇತ್ರಗಳನ್ನು ಉಳಸಿಕೊಳ್ಳಲು ಜೆಡಿಎಸ್ ಶತಾಯಗತಾಯ ಪ್ರಯತ್ನ ನಡೆಸಿ ಅದನ್ನು ಮೈತ್ರಿ ಧರ್ಮದಲ್ಲಿ ಬಿಜೆಪಿ ವರಿಷ್ಟರ ಬಳಿ ಕೇಳಿತ್ತು ಅದರಂತೆ ರಾಜ್ಯ ಬಿಜೆಪಿ ನಾಯಕರ ಅಭಿಪ್ರಾಯವನ್ನು ಪಡೆದಂತ ಬಿಜೆಪಿ ವರಿಷ್ಠರು, ಕೇಂದ್ರ ಗೃಹಮಂತ್ರಿ ಅಮಿತ್ ಷಾ ಗಮನಕ್ಕೆ ತಂದಿದ್ದರು ಅದರಂತೆ ಅಮಿತ್ ಷಾ ತಾವೆ ಆಸಕ್ತಿ ತೋರಿ ದೆಹಲಿಯ ಪೊಲಿಟಿಕಲ್ ಅನಾಲಿಸ್ಟ ತಂಡದ ಕೈಯಲ್ಲಿ ಸರ್ವೆ ಮಾಡಿಸಿದ್ದು ಒಂದು ತಿಂಗಳ ಅವಧಿಯಲ್ಲಿ ಮಾಡಿಸಿರುವ ಸರ್ವೆಯಲ್ಲಿ ಐದು ಕ್ಷೇತ್ರಗಳಲ್ಲಿ ಜೆಡಿಎಸ್ ಗೆ ಅನಕೂಲಕರವಾದ ವಾತವರಣ ಇದೆ ಎನ್ನವ ಮಾಹಿತಿ ಲಭ್ಯವಾಗಿದಿಯಂತೆ,ಸರ್ವೆ ವರದಿಯಂತೆ ಐದು ಕ್ಷೇತ್ರಗಳನ್ನು ಜೆಡಿಎಸ್ ಗೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ಹೊರ ಬಿದಿದ್ದೆ.ಬೆಂಗಳೂರು ಗ್ರಾಮಾಂತರ ಅಥಾವ ಮಂಡ್ಯದಲ್ಲಿ ಸ್ವತಃ ಕುಮಾರಸ್ವಾಮಿ ನಿಲ್ಲುವ ಕುರಿತಂತೆ ಬಿಜೆಪಿ ಸರ್ವೆಯಲ್ಲಿ ಪಾಸಿಟಿವ್ ರಿಸಲ್ಟ್ ಬಂದಿರುವ ಬಗ್ಗೆ ಹೇಳಲಾಗುತ್ತಿದೆ.
ಮುಳಬಾಗಿಲು ಶಾಸಕ ಲೋಕಸಭಾ ಚುನಾವಣಾ ಅಕಾಂಕ್ಷಿ.
ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ದಿಸಲು ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ಧಿಮಂಜುನಾಥ್ ಆಸಕ್ತಿ ತೋರಿದ್ದಾರೆ ಈ ಕುರಿತಂತೆ ತಮ್ಮ ನಿಲವನ್ನು ಜೆಡಿಎಸ್ ವರಿಷ್ಟರ ಮುಂದೆ ವ್ಯಕ್ತಪಡಿಸಿದ್ದು, ಮೂರು ದಿನಗಳ ಹಿಂದೆ ಚಿಂತಾಮಣಿಯ ಮಾಜಿ ಶಾಸಕ ಕೃಷ್ಣಾರೆಡ್ಡಿ ಮನೆಯಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ತಾವು ಲೋಕಸಭಾ ಚುನಾವಣೆಯಲ್ಲಿ ಸ್ಪರ್ದಿಸುವ ಬಗ್ಗೆ ಮಾಧ್ಯಮದವರ ಮುಂದೆ ಬಹಿರಂಗ ಪಡಿಸಿದ್ದಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Sunday, June 15