ಬೆಂಗಳೂರು: ಕರ್ನಾಟಕದ ನಾಲ್ಕು ಸಾರಿಗೆ ಸಂಸ್ಥೆಗಳಿಗೂ ಅನ್ವಯಿಸುವಂತೆ ಪ್ರಯಾಣದರವನ್ನು ಇಂದು (ಶನಿವಾರ) ಮಧ್ಯ ರಾತ್ರಿಯಿಂದಲೇ ಜಾರಿಗೆ ಬರುವಂತೆ ಏರಿಕೆ ಮಾಡಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ.
ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು,ಅದರಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2015ರಲ್ಲಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳಲ್ಲಿ 2020ರಲ್ಲಿ ಪಯಾಣದ ದರ ಪರಿಷ್ಕರಣೆ ಮಾಡಲಾಗಿರುವುದಾಗಿ ಹೇಳಲಾಗಿರುತ್ತದೆ.
ಪ್ರತಿದಿನ ಸರಾಸರಿ 116.18ಲಕ್ಷ ಪುಯಾಣಿಕರು ನಾಲ್ಕು ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ಪ್ರಯಾಣಿಸುತ್ತಿರುತ್ತಾರೆ ಹಾಗು ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆಯ ಅನುಷ್ಠಾನದ ನಂತರ ರಾಜ್ಯದಲ್ಲಿ ಸುಮಾರು ಅರವತ್ನಾಲ್ಕು ಲಕ್ಷ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸುತ್ತಿರುವುದಾಗಿ ಎಂದು ಅಂದಾಜಿಸಲಾಗಿದೆ.
ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳು ಪ್ರಸ್ತುತ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿವೆ. ಸಾರಿಗೆ ಸಂಸ್ಥೆಗಳಿಗೆ ಡೀಸೆಲ್ ಮತ್ತು ಸಿಬ್ಬಂದಿಗಳಿಗೆ ವೇತನ ಪಾವತಿಸುವುದು ಪ್ರಮುಖ ವೆಚ್ಚಗಳಾಗಿದ್ದು, ಸದರಿ ಎರಡು ವೆಚ್ಚಗಳು ಸೇರಿದಂತೆ ಒಟ್ಟು ಶೇಕಡ 90ರಷ್ಟು ವೆಚ್ಚ ಹೆಚ್ಚಳವಾಗಿರುತ್ತದೆ. ಸದರಿ ಎರಡು ಅಂಶಗಳಲ್ಲಿ ಯಾವುದೇ ಬದಲಾವಣೆಯಾದಲ್ಲಿ ನಗದು ಕೊರತೆಗೆ ಕಾರಣವಾಗುತ್ತದೆ ಎನ್ನಲಾಗಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



