ಶ್ರೀನಿವಾಸಪುರ:ಕೆ ಎಸ್ ಆರ್ ಟಿ ಸಿ ಉದ್ಯೋಗಿ ಎಂ.ಡಿ.ಬಾಬಾಜಾನ್(53) ಇಂದು ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.ಶ್ರೀನಿವಾಸಪುರ ಘಟಕದಲ್ಲಿ ಚಾಲಕನಾಗಿದ್ದ ಅವರು ಅಪಘಾತದಲ್ಲಿ ಕಾಲುಗಳಿಗೆ ತೀವ್ರಗಾಯವಾದ ಹಿನ್ನಲೆಯಲ್ಲಿ ಕಚೇರಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಅವರು 26ವರ್ಷಗಳಿಂದ ರಾಜ್ಯಸಾರಿಗೆ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.ಮೂಲತಃ ತಾಲೂಕಿನ ಮುತ್ತಕಪಲ್ಲಿ ಗ್ರಾಮದವರಾಗಿದ್ದು ಶ್ರೀನಿವಾಸಪುರ ಪಟ್ಟಣದಲ್ಲಿ ಕುಟುಂಬ ಸಮೇತರಾಗಿ ವಾಸವಾಗಿದ್ದರು, ಸದಾ ಹಸನ್ಮುಖಿಯಾಗಿ ಸಮಾಜದಲ್ಲಿ ಎಲ್ಲರೊಂದಿಗೂ ಸೌಹಾರ್ದತೆಯಿಂದ ಬೆರೆಯುತ್ತಿದ್ದರು ಎಂದು ಸ್ನೇಹಿತರು ಹೇಳುತ್ತಾರೆ.ಮೃತ ಬಾಬಾಜಾನ್ ಪತ್ನಿ ಒರ್ವಪುತ್ರ ಒರ್ವಪುತ್ರಿ ಹಾಗು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಸಾರಿಗೆ ಸಂಸ್ಥೆ ವತಿಯಿಂದ ಗೌರವ
ಮೃತ ಬಾಬಾಜಾನ್ ಅವರಿಗೆ ರಾಜ್ಯ ಸಾರಿಗೆ ಸಂಸ್ಥೆ ವತಿಯಿಂದ ಗೌರವ ಸಲ್ಲಿಸಲಾಯಿತು ಸಾರಿಗೆ ಸಂಸ್ಥೆ ಶ್ರೀನಿವಾಸಪುರ ಘಟಕದ ವ್ಯವಸ್ಥಾಪಕ ವೆಂಕಟೇಶ್ ಹಾಗು ಸಂಸ್ಥೆ ಕಾರ್ಮಿಕ ಕಲ್ಯಾಣಾಧಿಕಾರಿ ನಾಗರಾಜ್ ಅವರು ಮುತ್ತಕಪಲ್ಲಿಗೆ ಭೇಟಿಕೊಟ್ಟು ಶ್ರದ್ಧಾಂಜಲಿ ಸಲ್ಲಿಸಿ ಕಾರ್ಮಿಕ ಕಲ್ಯಾಣ ನಿಧಿಯನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಿರುತ್ತಾರೆ.ಇಲಾಖೆ ಉದ್ಯೋಗಿಗಳು ಮುನಿರೆಡ್ಡಿ,ರೋಣೂರುಮಂಜು,ಸತೀಶ್,ನಾರಯಣಸ್ವಾಮಿ ಭೇಟಿಕೊಟ್ಟಿದ್ದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



