ಶ್ರೀನಿವಾಸಪುರ:ಕೆ ಎಸ್ ಆರ್ ಟಿ ಸಿ ಉದ್ಯೋಗಿ ಎಂ.ಡಿ.ಬಾಬಾಜಾನ್(53) ಇಂದು ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.ಶ್ರೀನಿವಾಸಪುರ ಘಟಕದಲ್ಲಿ ಚಾಲಕನಾಗಿದ್ದ ಅವರು ಅಪಘಾತದಲ್ಲಿ ಕಾಲುಗಳಿಗೆ ತೀವ್ರಗಾಯವಾದ ಹಿನ್ನಲೆಯಲ್ಲಿ ಕಚೇರಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಅವರು 26ವರ್ಷಗಳಿಂದ ರಾಜ್ಯಸಾರಿಗೆ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.ಮೂಲತಃ ತಾಲೂಕಿನ ಮುತ್ತಕಪಲ್ಲಿ ಗ್ರಾಮದವರಾಗಿದ್ದು ಶ್ರೀನಿವಾಸಪುರ ಪಟ್ಟಣದಲ್ಲಿ ಕುಟುಂಬ ಸಮೇತರಾಗಿ ವಾಸವಾಗಿದ್ದರು, ಸದಾ ಹಸನ್ಮುಖಿಯಾಗಿ ಸಮಾಜದಲ್ಲಿ ಎಲ್ಲರೊಂದಿಗೂ ಸೌಹಾರ್ದತೆಯಿಂದ ಬೆರೆಯುತ್ತಿದ್ದರು ಎಂದು ಸ್ನೇಹಿತರು ಹೇಳುತ್ತಾರೆ.ಮೃತ ಬಾಬಾಜಾನ್ ಪತ್ನಿ ಒರ್ವಪುತ್ರ ಒರ್ವಪುತ್ರಿ ಹಾಗು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಸಾರಿಗೆ ಸಂಸ್ಥೆ ವತಿಯಿಂದ ಗೌರವ
ಮೃತ ಬಾಬಾಜಾನ್ ಅವರಿಗೆ ರಾಜ್ಯ ಸಾರಿಗೆ ಸಂಸ್ಥೆ ವತಿಯಿಂದ ಗೌರವ ಸಲ್ಲಿಸಲಾಯಿತು ಸಾರಿಗೆ ಸಂಸ್ಥೆ ಶ್ರೀನಿವಾಸಪುರ ಘಟಕದ ವ್ಯವಸ್ಥಾಪಕ ವೆಂಕಟೇಶ್ ಹಾಗು ಸಂಸ್ಥೆ ಕಾರ್ಮಿಕ ಕಲ್ಯಾಣಾಧಿಕಾರಿ ನಾಗರಾಜ್ ಅವರು ಮುತ್ತಕಪಲ್ಲಿಗೆ ಭೇಟಿಕೊಟ್ಟು ಶ್ರದ್ಧಾಂಜಲಿ ಸಲ್ಲಿಸಿ ಕಾರ್ಮಿಕ ಕಲ್ಯಾಣ ನಿಧಿಯನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಿರುತ್ತಾರೆ.ಇಲಾಖೆ ಉದ್ಯೋಗಿಗಳು ಮುನಿರೆಡ್ಡಿ,ರೋಣೂರುಮಂಜು,ಸತೀಶ್,ನಾರಯಣಸ್ವಾಮಿ ಭೇಟಿಕೊಟ್ಟಿದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



