ಚಿಂತಾಮಣಿ:ಲಜ್ಜೆಗೆಟ್ಟ ಟೀಚರಮ್ಮನ ಅಸಹ್ಯಕರ ಫೋಟೋ ಸೇಷನ್ ಗೆ ಶೈಕ್ಷಣಿಕ ವ್ಯವಸ್ಥೆಯ ಗುರು-ಶಿಷ್ಯರ ನಡುವಿನ ಗೌರಹ್ವಾನಿತ ಬಾಂಧವ್ಯಕ್ಕೆ ಕಳಂಕ ತಂದಿದ್ದರೆ,ಬಾಲಕನೊರ್ವನ ಭವಿಷ್ಯತ್ತಿಗೆ ಮಾರಕವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.ಇಂತಹ ಘಟನೆಗೆ ಕಾರಣವಾಗಿರುವುದು ಚಿಂತಾಮಣಿ ತಾಲೂಕಿನ ಮುರುಗಮಲೆ ಸರ್ಕಾರಿ ಶಾಲೆಯ ಪ್ರಭಾರೆ ಮುಖ್ಯ ಶಿಕ್ಷಕಿಯ ಲಜ್ಜಗೆಟ್ಟ ವರ್ತನೆ. ಶಾಲಾ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯಿಲಾಗಿತ್ತು ಈ ಸಮಯದಲ್ಲಿ ಶಾಲೆಯ ಪ್ರಭಾರೆ ಮುಖ್ಯ ಶಿಕ್ಷಕಿ ಲಜ್ಜೆಗೆಟ್ಟ ಟೀಚರಮ್ಮ ಪುಷ್ಪಲತ ಫೋಟೋ ತೆವಲಿಗೆ ಶಾಲೆಯ ಹತ್ತನೆ ತರಗತಿ ವಿದ್ಯಾರ್ಥಿ ಅಪ್ರಾಪ್ತ ಬಾಲಕನೊಂದಿಗೆ ಹಚ್ಚ ಹಸಿರಿನ ಗಿಡ ಮರಗಳ ನಡುವೆ ಸಿನಿಮಾ ಹಿರೋ-ಹಿರೋಯಿನ್ ಸ್ಟೈಲ್ ನಲ್ಲಿ ಅಸಭ್ಯಕರವಾದ ಭಂಗಿಗಳಲ್ಲಿ ನಿಂತು ಪೋಟೋ ಶೂಟ್ ಅನ್ನು ಇನ್ನೊಬ್ಬ ವಿದ್ಯಾರ್ಥಿ ಕೈಯಲ್ಲಿ ಮಾಡಿಸಿಕೊಂಡು ಅವುಗಳನ್ನು ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುತ್ತಾರೆ.ಟೀಚರಮ್ಮ ಬಾಲಕನೊಂದಿಗೆ ನಿಂತಿರುವ ಅಸಹ್ಯಕರ ಪೋಟೋಗಳು ವಿವಿಧ ಸಾಮಾಜಿಕ ಜಾಲತಾಗಣಲ್ಲಿ ವೈರಲ್ ಆಗಿದೆ.
ಟೀಚರಮ್ಮನ ವರ್ತನೆಗೆ ಸಾರ್ವಜನಿಕರ ಆಕ್ರೋಶ
ವಿದ್ಯಾರ್ಥಿ ಮತ್ತು ಶಿಕ್ಷಕತನದ ನಡುವಿನ ಗೌರಹ್ವಾನಿತ ಬಾಂಧವ್ಯಕ್ಕೆ ಕಳಂಕ ತಂದಿರುವ ಶಿಕ್ಷಕಿಯ ವಿರುದ್ದ ಕ್ರಮ ಜರುಗಿಸುವಂತೆ ಸಾರ್ವಜನಿಕರು ಮತ್ತು ಶಾಲೆಯ ವಿದ್ಯಾರ್ಥಿಗಳ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಒತ್ತಾಯಿಸಿದ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡ ಚಿಂತಾಮಣಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಸರಕಾರಿ ಫ್ರೌಡಶಾಲೆಗೆ ಖುದ್ದು ಭೇಟಿ ನೀಡಿ ಪ್ರವಾಸಕ್ಕೆ ತೆರಳಿದ್ದ ಮುಖ್ಯ ಶಿಕ್ಷಕಿ ಹಾಗು ಇತರೆ ಶಿಕ್ಷಕರು,ಸಿಬ್ಬಂದಿಯ ಮಾಹಿತಿ ಪಡೆದು ವಿಚಾರಣೆ ನಡೆಸಿ ಶಾಲಾಭಿವೃದ್ದಿ ಸಮಿತಿಯವರೊಂದಿಗೆ ಚರ್ಚಿಸಿ ಶಿಕ್ಷಕಿಯ ವರ್ತನೆ ಕುರಿತಾಗಿ ಉಪನಿರ್ದೇಶಕರಿಗೆ ವರದಿ ಸಲ್ಲಿಸಿದ್ದರು ಅದರಂತೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜನೇಯಪ್ಪ ವಿವಾದತ್ಮಕ ಶಿಕ್ಷಕಿ ಪುಷ್ಪಲತಾರನ್ನು ಕರ್ನಾಟಕ ನಾಗರೀಕ ಸೇವಾ ವರ್ಗೀಕರಣ,ನಿಯಂತ್ರಣ ಮತ್ತು ಅಫೀಲು ನಿಯಮ 1957 ರ ನಿಯಮ 10 ರಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಅಮಾನತ್ತು ಮಾಡಿ ಅದೇಶ ಹೊರಡಿಸಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



