ಶ್ರೀನಿವಾಸಪುರ:ರಾಜ್ಯದಲ್ಲಿರುವ ಆಡಳಿತ ರೂಡ ಬಿಜೆಪಿ ಸರ್ಕಾರ ದಲಿತ ಸಮುದಾಯಗಳಿಗೆ ನ್ಯಾಯೋಚಿತವಾದ ಮೀಸಲಾತಿ ಜಾರಿಮಾಡಲು ಉಪ ಸಮಿತಿ ರಚಿಸಿ ಚುನಾವಣೆ ಗಿಮಿಕ್ ಮಾಡುತ್ತಿದೆ ಎಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವರಾಜ್ ಆರೋಪಿಸಿದರು.
ಅವರು ಮಾದಿಗ ದಂಡೋರ ಮೀಸಲಾತಿ ಹೊರಾಟ ಸಮಿತಿ ಶ್ರೀನಿವಾಸಪುರ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಸಂದರ್ಭದಲ್ಲಿ ಪಾಲ್ಗೋಂಡಿದ್ದ ಅವರು ದಲಿತ ಸಮುದಾಯಗಳ ಮೀಸಲಾತಿ ವಿಚಾರದಲ್ಲಿ ಸರ್ಕಾರದ ನಡವಳಿಕೆಗಳ ವಿರುದ್ದ ಕಿಡಿ ಕಾರಿದರು,ಸರ್ಕಾರ ಸದಾಶಿವ ಆಯೋಗದ ವರದಿ ಜಾರಿ ಮಾಡಲು ಉಪ ಸಮಿತಿ ರಚನೆ ಮಾಡಿ ಅದಕ್ಕೆ ಕಾನೂನು ಮಂತ್ರಿ ಮಾಧುಸ್ವಾಮಿಯವರನ್ನು ಅಧ್ಯಕ್ಷರನ್ನಾಗಿ ಮಾಡಿರುವ ಬಿಜೆಪಿ ಸರ್ಕಾರ ಚುನಾವಣೆ ಹತ್ತಿರ ಬರುತ್ತಿದ್ದಂತೆ ದಲಿತ ಸಮುದಾಯಗಳನ್ನು ದಾರಿ ತಪ್ಪಿಸುವಂತ ಕೆಲಸವನ್ನು ವ್ಯವಸ್ಥಿತವಾಗಿ ಮಾಡುವಲ್ಲಿ ಮುಂದಾಗಿದೆ ಎಂದು ದೂರಿದರು ಸಮುದಾಯಕ್ಕೆ ಅನ್ಯಾಯ ಮಾಡದೆ ಚಳಿಗಾಲ ಅಧಿವೇಶನದಲ್ಲಿ ಮೊದಲ ದಿನವೆ ಸದಾಶಿವ ಆಯೋಗ ವರದಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿದರು.
ಸರ್ಕಾರ ಈ ಬಗ್ಗೆ ಮುಂದಾಗದಿದ್ದರೆ ಮಾದಿಗ ಸಮುದಾಯದ ಹೋರಾಟ ತೀವ್ರವಾಗುತ್ತದೆ ಈ ತಿಂಗಳ 27 ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕಲಾಗುವುದು ಪ್ರತಿಭಟನೆಗೆ ಅಡ್ಡಿಪಡಿಸಿದರೆ ಮುಂದಿನ ಚುನಾವಣೆಯಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳಬೇಕೆಂದು ಜನವರಿ 6 ಕ್ಕೆ ರಾಜ್ಯಕ್ಕೆ ಆಗಮಿಸುತ್ತಿರುವ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಮಾರ್ಗದರ್ಶನದಲ್ಲಿ ನಡೆಯುವ ಸಭೆಯಲ್ಲಿ ರಾಜ್ಯದಲ್ಲಿ ಬಹು ಸಂಖ್ಯಾತರಾಗಿರುವ ನಾವು ತಿರ್ಮಾನ ತಗೆದುಕೊಳ್ಳುತ್ತೆವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡ ಜಿ.ಶಂಕರ್ ಅವಲಕುಪ್ಪ, ರಾಜ್ಯ ಗೌರವ ಅಧ್ಯಕ್ಷ ಕೋಲಾರರವಿ,ಸಂಘಟನಾ ಕಾರ್ಯದರ್ಶಿ ಮುಳಬಾಗಿಲು ನಾಗರಾಜ್, ಮುಂತಾದವರು ಇದ್ದರು.
ತಾಲೂಕು ನೂತನ ಪದಾಧಿಕಾರಿಗಳಾಗಿ ಗೌ.ಅಧ್ಯಕ್ಷ ಕೆಂಚಪ್ಪ,ಅಧ್ಯಕ್ಷರಾಗಿ ದೇವಲಪಲ್ಲಿ ರವಿಕುಮಾರ್,ಪ್ರಧಾನಕಾರ್ಯದರ್ಶಿ ನಾರಮಾಕಲಹಳ್ಳಿ ಚಂದ್ರಪ್ಪ,ಕಾರ್ಯದರ್ಶಿ ಅನಿಲ್ ಕುಮಾರ್, ಯುವ ಘಟಕಕ್ಕೆ ಕಲ್ಯಾಣ್ ಹಾಗು ಮಹಿಳಾ ಘಟಕದ ಪದಾಧಿಕಾರಿಗಳಾಗಿ ಗೌ.ಅಧ್ಯಕ್ಷರಾಗಿ ವೆಂಕಟಲಕ್ಷ್ಮಮ್ಮ,ಅಧ್ಯಕ್ಷರಾಗಿ ವರಲಕ್ಷ್ಮೀ, ಪ್ರಧಾನ ಕಾರ್ಯದರ್ಶಿಯಾಗಿ ಶಿಲ್ಪ ಆಯ್ಕೆಯಾಗಿರುತ್ತಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



