ನ್ಯೂಜ್ ಡೆಸ್ಕ್:ಮಹಾರಾಷ್ಟ್ರ ಸರ್ಕಾರ ಗೋವನ್ನು ‘ರಾಜ್ಯ ಮಾತಾ’ ಎಂದು ಘೋಷಿಸಿ ಆದೇಶ ಹೊರಡಿಸಿದೆ. ಭಾರತೀಯ ಸಂಪ್ರದಾಯದಲ್ಲಿ ಗೋವಿನ ಸಾಂಸ್ಕೃತಿಕ ಪ್ರಾಮುಖ್ಯತೆಯನ್ನು ಗುರುತಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅದು ಹೇಳಿದೆ. ಕೃಷಿಯಲ್ಲಿ ಹಸುವಿನ ಸಗಣಿ ಬಳಸುವುದರಿಂದ ಆಹಾರದಲ್ಲಿ ಪೋಷಕಾಂಶಗಳು ಸೇರುತ್ತವೆ ಎಂದು ವ್ಯಾಖ್ಯಾನಿಸಲಾಗಿದೆ.
ಚುನಾವಣೆ ಹೊತ್ತಿನಲ್ಲಿ ನಿರ್ಧಾರ
ಮಹಾರಾಷ್ಟ್ರದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಸದ್ಯದಲ್ಲಿ ಚುನಾವಣಾ ದಿನಾಂಕವೂ ಘೋಷಣೆಯಾಗಲಿರುವ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಸೋಮವಾರ ಗೋವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿ ಆದೇಶ ಹೊರಡಿಸಿದ್ದು ಭಾರತೀಯ ಸಂಪ್ರದಾಯದಲ್ಲಿ ಗೋವುಗಳ ಸಾಂಸ್ಕೃತಿಕ ಮಹತ್ವವನ್ನು ಉಲ್ಲೇಖಿಸಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ.
ಇನ್ನು ರಾಜ್ಯ ಮಾತೆ ಎಂದು ಘೋಷಿಸಿದ ಅಧಿಕೃತ ಆದೇಶದಲ್ಲಿ, ಏಕನಾಥ್ ಶಿಂಧೆ ನೇತೃತ್ವದ NDAಸರ್ಕಾರ ಹಸು ಭಾರತೀಯ ಸಂಪ್ರದಾಯದ ಪ್ರಮುಖ ಭಾಗವಾಗಿದೆ ಮತ್ತು ಪ್ರಾಚೀನ ಕಾಲದಿಂದಲೂ ಗೋವಿಗೆ ಆಧ್ಯಾತ್ಮಿಕ, ವೈಜ್ಞಾನಿಕ ಮತ್ತು ಸಾಮಾಜಿಕ-ಆರ್ಥಿಕ ಮಹತ್ವವಿದೆ ಎಂದು ಹೇಳಲಾಗಿದೆ.ಭಾರತದಾದ್ಯಂತ ಕಂಡುಬರುವ ವಿವಿಧ ತಳಿಯ ಹಸುಗಳನ್ನು ಎತ್ತಿ ತೋರಿಸಿರುವ ಮಹಾರಾಷ್ಟ್ರ ಸರ್ಕಾರವು ದೇಶಿ ಹಸುಗಳ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14