ನ್ಯೂಜ್ ಡೆಸ್ಕ್:ಮಹಾರಾಷ್ಟ್ರ ಸರ್ಕಾರ ಗೋವನ್ನು ‘ರಾಜ್ಯ ಮಾತಾ’ ಎಂದು ಘೋಷಿಸಿ ಆದೇಶ ಹೊರಡಿಸಿದೆ. ಭಾರತೀಯ ಸಂಪ್ರದಾಯದಲ್ಲಿ ಗೋವಿನ ಸಾಂಸ್ಕೃತಿಕ ಪ್ರಾಮುಖ್ಯತೆಯನ್ನು ಗುರುತಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅದು ಹೇಳಿದೆ. ಕೃಷಿಯಲ್ಲಿ ಹಸುವಿನ ಸಗಣಿ ಬಳಸುವುದರಿಂದ ಆಹಾರದಲ್ಲಿ ಪೋಷಕಾಂಶಗಳು ಸೇರುತ್ತವೆ ಎಂದು ವ್ಯಾಖ್ಯಾನಿಸಲಾಗಿದೆ.
ಚುನಾವಣೆ ಹೊತ್ತಿನಲ್ಲಿ ನಿರ್ಧಾರ
ಮಹಾರಾಷ್ಟ್ರದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಸದ್ಯದಲ್ಲಿ ಚುನಾವಣಾ ದಿನಾಂಕವೂ ಘೋಷಣೆಯಾಗಲಿರುವ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಸೋಮವಾರ ಗೋವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿ ಆದೇಶ ಹೊರಡಿಸಿದ್ದು ಭಾರತೀಯ ಸಂಪ್ರದಾಯದಲ್ಲಿ ಗೋವುಗಳ ಸಾಂಸ್ಕೃತಿಕ ಮಹತ್ವವನ್ನು ಉಲ್ಲೇಖಿಸಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ.
ಇನ್ನು ರಾಜ್ಯ ಮಾತೆ ಎಂದು ಘೋಷಿಸಿದ ಅಧಿಕೃತ ಆದೇಶದಲ್ಲಿ, ಏಕನಾಥ್ ಶಿಂಧೆ ನೇತೃತ್ವದ NDAಸರ್ಕಾರ ಹಸು ಭಾರತೀಯ ಸಂಪ್ರದಾಯದ ಪ್ರಮುಖ ಭಾಗವಾಗಿದೆ ಮತ್ತು ಪ್ರಾಚೀನ ಕಾಲದಿಂದಲೂ ಗೋವಿಗೆ ಆಧ್ಯಾತ್ಮಿಕ, ವೈಜ್ಞಾನಿಕ ಮತ್ತು ಸಾಮಾಜಿಕ-ಆರ್ಥಿಕ ಮಹತ್ವವಿದೆ ಎಂದು ಹೇಳಲಾಗಿದೆ.ಭಾರತದಾದ್ಯಂತ ಕಂಡುಬರುವ ವಿವಿಧ ತಳಿಯ ಹಸುಗಳನ್ನು ಎತ್ತಿ ತೋರಿಸಿರುವ ಮಹಾರಾಷ್ಟ್ರ ಸರ್ಕಾರವು ದೇಶಿ ಹಸುಗಳ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



