ನ್ಯೂಜ್ ಡೆಸ್ಕ್:ಮಹಾರಾಷ್ಟ್ರ ಸರ್ಕಾರ ಗೋವನ್ನು ‘ರಾಜ್ಯ ಮಾತಾ’ ಎಂದು ಘೋಷಿಸಿ ಆದೇಶ ಹೊರಡಿಸಿದೆ. ಭಾರತೀಯ ಸಂಪ್ರದಾಯದಲ್ಲಿ ಗೋವಿನ ಸಾಂಸ್ಕೃತಿಕ ಪ್ರಾಮುಖ್ಯತೆಯನ್ನು ಗುರುತಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅದು ಹೇಳಿದೆ. ಕೃಷಿಯಲ್ಲಿ ಹಸುವಿನ ಸಗಣಿ ಬಳಸುವುದರಿಂದ ಆಹಾರದಲ್ಲಿ ಪೋಷಕಾಂಶಗಳು ಸೇರುತ್ತವೆ ಎಂದು ವ್ಯಾಖ್ಯಾನಿಸಲಾಗಿದೆ.
ಚುನಾವಣೆ ಹೊತ್ತಿನಲ್ಲಿ ನಿರ್ಧಾರ
ಮಹಾರಾಷ್ಟ್ರದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಸದ್ಯದಲ್ಲಿ ಚುನಾವಣಾ ದಿನಾಂಕವೂ ಘೋಷಣೆಯಾಗಲಿರುವ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಸೋಮವಾರ ಗೋವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿ ಆದೇಶ ಹೊರಡಿಸಿದ್ದು ಭಾರತೀಯ ಸಂಪ್ರದಾಯದಲ್ಲಿ ಗೋವುಗಳ ಸಾಂಸ್ಕೃತಿಕ ಮಹತ್ವವನ್ನು ಉಲ್ಲೇಖಿಸಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ.
ಇನ್ನು ರಾಜ್ಯ ಮಾತೆ ಎಂದು ಘೋಷಿಸಿದ ಅಧಿಕೃತ ಆದೇಶದಲ್ಲಿ, ಏಕನಾಥ್ ಶಿಂಧೆ ನೇತೃತ್ವದ NDAಸರ್ಕಾರ ಹಸು ಭಾರತೀಯ ಸಂಪ್ರದಾಯದ ಪ್ರಮುಖ ಭಾಗವಾಗಿದೆ ಮತ್ತು ಪ್ರಾಚೀನ ಕಾಲದಿಂದಲೂ ಗೋವಿಗೆ ಆಧ್ಯಾತ್ಮಿಕ, ವೈಜ್ಞಾನಿಕ ಮತ್ತು ಸಾಮಾಜಿಕ-ಆರ್ಥಿಕ ಮಹತ್ವವಿದೆ ಎಂದು ಹೇಳಲಾಗಿದೆ.ಭಾರತದಾದ್ಯಂತ ಕಂಡುಬರುವ ವಿವಿಧ ತಳಿಯ ಹಸುಗಳನ್ನು ಎತ್ತಿ ತೋರಿಸಿರುವ ಮಹಾರಾಷ್ಟ್ರ ಸರ್ಕಾರವು ದೇಶಿ ಹಸುಗಳ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



