ಶ್ರೀನಿವಾಸಪುರ: ಶ್ರೀನಿವಾಸಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-69ರಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಡು ಜಿಂಕೆಯೊಂದು ಮೃತಪಟ್ಟಿದೆ. ಬಾರಿ ಗಾತ್ರದ ಜಿಂಕೆಯೊಂದು ರಸ್ತೆ ದಾಟುವಾಗ ಚಿಂತಾಮಣಿ ಕಡೆ ಹೊರಟಿದ್ದ ಕಾರಿನ ಮೇಲೆ ಬಿದ್ದು ಜಿಂಕೆ ಸ್ಥಳದಲ್ಲಿಯೇ ಮೃತಪಟ್ಟಿದೆ. ತಿರುಪತಿ ದರುಶನ ಮುಗಿಸಿ ಚಿಕ್ಕಬಳ್ಳಾಪುರದ ಕಡೆ ಹೋರಟಿದ್ದ ಕಾರು ಕಲ್ಲೂರು ಅರಣ್ಯ ಇಲಾಖೆ ಸಸ್ಯ ಕ್ಷೇತ್ರದ ಬಳಿ ಹೋಗುತ್ತಿದ್ದಾಗ ವಾಹನದ ಮೇಲೆ ಬಾರಿ ಗಾತ್ರದ ವಸ್ತು ಬಿದ್ದಂತಾಗಿ ಕಾರು ನಿಯಂತ್ರಣ ತಪ್ಪಿದಂತಾಯಿತು ತಕ್ಷಣ ಕಾರು ನಿಲ್ಲಿಸಿ ನೋಡಿದಾಗ ರಸ್ತೆ ಬದಿ ಜಿಂಕೆ ಸತ್ತುಬಿದ್ದಿದೆ ಎಂದು ಕಾರು ಚಾಲಕ ಚಿರಂಜಿವಿ ಹೇಳುತ್ತಾರೆ.
ಕಾರು ಹಾಗು ಜಿಂಕೆ ಶವ ವಶಕ್ಕೆ ಪಡೆದ ಅರಣ್ಯ ಇಲಾಖೆ
ಸಾರ್ವಜನಿಕರು ಅಪಘಾತ ಸುದ್ಧಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದಾಗ ಅರಣ್ಯ ರಕ್ಷಕ ಅನಿಲ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮೆಲಧಿಕಾರಿಗಳ ಸೂಚನೆಯಂತೆ ಕಾರನ್ನು ವಶಕ್ಕೆ ಪಡೆದು,ಜಿಂಕೆ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ತಗೆದುಕೊಂಡು ಹೋದರು.ಅರಣ್ಯ ಅಧಿಕಾರಿಗಳು ಹೇಳುವಂತೆ ಕಲ್ಲೂರು ಅರಣ್ಯದಲ್ಲಿ ಜಿಂಕೆಗಳು ದೊಡ್ಡ ಸಂಖ್ಯೆಯಲ್ಲಿದ್ದು ಮಳೆ ಹಿನ್ನಲೆಯಲ್ಲಿ ರಸ್ತೆ ದಾಟಲು ಅರಣ್ಯದಿಂದ ಹೊರಗೆ ಬಂದಿರಬಹುದು ಎಂದು ಶಂಕಿಸಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26