ಶ್ರೀನಿವಾಸಪುರ: ಶ್ರೀನಿವಾಸಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-69ರಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಡು ಜಿಂಕೆಯೊಂದು ಮೃತಪಟ್ಟಿದೆ. ಬಾರಿ ಗಾತ್ರದ ಜಿಂಕೆಯೊಂದು ರಸ್ತೆ ದಾಟುವಾಗ ಚಿಂತಾಮಣಿ ಕಡೆ ಹೊರಟಿದ್ದ ಕಾರಿನ ಮೇಲೆ ಬಿದ್ದು ಜಿಂಕೆ ಸ್ಥಳದಲ್ಲಿಯೇ ಮೃತಪಟ್ಟಿದೆ. ತಿರುಪತಿ ದರುಶನ ಮುಗಿಸಿ ಚಿಕ್ಕಬಳ್ಳಾಪುರದ ಕಡೆ ಹೋರಟಿದ್ದ ಕಾರು ಕಲ್ಲೂರು ಅರಣ್ಯ ಇಲಾಖೆ ಸಸ್ಯ ಕ್ಷೇತ್ರದ ಬಳಿ ಹೋಗುತ್ತಿದ್ದಾಗ ವಾಹನದ ಮೇಲೆ ಬಾರಿ ಗಾತ್ರದ ವಸ್ತು ಬಿದ್ದಂತಾಗಿ ಕಾರು ನಿಯಂತ್ರಣ ತಪ್ಪಿದಂತಾಯಿತು ತಕ್ಷಣ ಕಾರು ನಿಲ್ಲಿಸಿ ನೋಡಿದಾಗ ರಸ್ತೆ ಬದಿ ಜಿಂಕೆ ಸತ್ತುಬಿದ್ದಿದೆ ಎಂದು ಕಾರು ಚಾಲಕ ಚಿರಂಜಿವಿ ಹೇಳುತ್ತಾರೆ.
ಕಾರು ಹಾಗು ಜಿಂಕೆ ಶವ ವಶಕ್ಕೆ ಪಡೆದ ಅರಣ್ಯ ಇಲಾಖೆ
ಸಾರ್ವಜನಿಕರು ಅಪಘಾತ ಸುದ್ಧಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದಾಗ ಅರಣ್ಯ ರಕ್ಷಕ ಅನಿಲ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮೆಲಧಿಕಾರಿಗಳ ಸೂಚನೆಯಂತೆ ಕಾರನ್ನು ವಶಕ್ಕೆ ಪಡೆದು,ಜಿಂಕೆ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ತಗೆದುಕೊಂಡು ಹೋದರು.ಅರಣ್ಯ ಅಧಿಕಾರಿಗಳು ಹೇಳುವಂತೆ ಕಲ್ಲೂರು ಅರಣ್ಯದಲ್ಲಿ ಜಿಂಕೆಗಳು ದೊಡ್ಡ ಸಂಖ್ಯೆಯಲ್ಲಿದ್ದು ಮಳೆ ಹಿನ್ನಲೆಯಲ್ಲಿ ರಸ್ತೆ ದಾಟಲು ಅರಣ್ಯದಿಂದ ಹೊರಗೆ ಬಂದಿರಬಹುದು ಎಂದು ಶಂಕಿಸಿದ್ದಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14