ಶ್ರೀನಿವಾಸಪುರ: ಶ್ರೀನಿವಾಸಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-69ರಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಡು ಜಿಂಕೆಯೊಂದು ಮೃತಪಟ್ಟಿದೆ. ಬಾರಿ ಗಾತ್ರದ ಜಿಂಕೆಯೊಂದು ರಸ್ತೆ ದಾಟುವಾಗ ಚಿಂತಾಮಣಿ ಕಡೆ ಹೊರಟಿದ್ದ ಕಾರಿನ ಮೇಲೆ ಬಿದ್ದು ಜಿಂಕೆ ಸ್ಥಳದಲ್ಲಿಯೇ ಮೃತಪಟ್ಟಿದೆ. ತಿರುಪತಿ ದರುಶನ ಮುಗಿಸಿ ಚಿಕ್ಕಬಳ್ಳಾಪುರದ ಕಡೆ ಹೋರಟಿದ್ದ ಕಾರು ಕಲ್ಲೂರು ಅರಣ್ಯ ಇಲಾಖೆ ಸಸ್ಯ ಕ್ಷೇತ್ರದ ಬಳಿ ಹೋಗುತ್ತಿದ್ದಾಗ ವಾಹನದ ಮೇಲೆ ಬಾರಿ ಗಾತ್ರದ ವಸ್ತು ಬಿದ್ದಂತಾಗಿ ಕಾರು ನಿಯಂತ್ರಣ ತಪ್ಪಿದಂತಾಯಿತು ತಕ್ಷಣ ಕಾರು ನಿಲ್ಲಿಸಿ ನೋಡಿದಾಗ ರಸ್ತೆ ಬದಿ ಜಿಂಕೆ ಸತ್ತುಬಿದ್ದಿದೆ ಎಂದು ಕಾರು ಚಾಲಕ ಚಿರಂಜಿವಿ ಹೇಳುತ್ತಾರೆ.
ಕಾರು ಹಾಗು ಜಿಂಕೆ ಶವ ವಶಕ್ಕೆ ಪಡೆದ ಅರಣ್ಯ ಇಲಾಖೆ
ಸಾರ್ವಜನಿಕರು ಅಪಘಾತ ಸುದ್ಧಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದಾಗ ಅರಣ್ಯ ರಕ್ಷಕ ಅನಿಲ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮೆಲಧಿಕಾರಿಗಳ ಸೂಚನೆಯಂತೆ ಕಾರನ್ನು ವಶಕ್ಕೆ ಪಡೆದು,ಜಿಂಕೆ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ತಗೆದುಕೊಂಡು ಹೋದರು.ಅರಣ್ಯ ಅಧಿಕಾರಿಗಳು ಹೇಳುವಂತೆ ಕಲ್ಲೂರು ಅರಣ್ಯದಲ್ಲಿ ಜಿಂಕೆಗಳು ದೊಡ್ಡ ಸಂಖ್ಯೆಯಲ್ಲಿದ್ದು ಮಳೆ ಹಿನ್ನಲೆಯಲ್ಲಿ ರಸ್ತೆ ದಾಟಲು ಅರಣ್ಯದಿಂದ ಹೊರಗೆ ಬಂದಿರಬಹುದು ಎಂದು ಶಂಕಿಸಿದ್ದಾರೆ.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27