ಶ್ರೀನಿವಾಸಪುರ: ಶ್ರೀನಿವಾಸಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-69ರಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಡು ಜಿಂಕೆಯೊಂದು ಮೃತಪಟ್ಟಿದೆ. ಬಾರಿ ಗಾತ್ರದ ಜಿಂಕೆಯೊಂದು ರಸ್ತೆ ದಾಟುವಾಗ ಚಿಂತಾಮಣಿ ಕಡೆ ಹೊರಟಿದ್ದ ಕಾರಿನ ಮೇಲೆ ಬಿದ್ದು ಜಿಂಕೆ ಸ್ಥಳದಲ್ಲಿಯೇ ಮೃತಪಟ್ಟಿದೆ. ತಿರುಪತಿ ದರುಶನ ಮುಗಿಸಿ ಚಿಕ್ಕಬಳ್ಳಾಪುರದ ಕಡೆ ಹೋರಟಿದ್ದ ಕಾರು ಕಲ್ಲೂರು ಅರಣ್ಯ ಇಲಾಖೆ ಸಸ್ಯ ಕ್ಷೇತ್ರದ ಬಳಿ ಹೋಗುತ್ತಿದ್ದಾಗ ವಾಹನದ ಮೇಲೆ ಬಾರಿ ಗಾತ್ರದ ವಸ್ತು ಬಿದ್ದಂತಾಗಿ ಕಾರು ನಿಯಂತ್ರಣ ತಪ್ಪಿದಂತಾಯಿತು ತಕ್ಷಣ ಕಾರು ನಿಲ್ಲಿಸಿ ನೋಡಿದಾಗ ರಸ್ತೆ ಬದಿ ಜಿಂಕೆ ಸತ್ತುಬಿದ್ದಿದೆ ಎಂದು ಕಾರು ಚಾಲಕ ಚಿರಂಜಿವಿ ಹೇಳುತ್ತಾರೆ.
ಕಾರು ಹಾಗು ಜಿಂಕೆ ಶವ ವಶಕ್ಕೆ ಪಡೆದ ಅರಣ್ಯ ಇಲಾಖೆ
ಸಾರ್ವಜನಿಕರು ಅಪಘಾತ ಸುದ್ಧಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದಾಗ ಅರಣ್ಯ ರಕ್ಷಕ ಅನಿಲ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮೆಲಧಿಕಾರಿಗಳ ಸೂಚನೆಯಂತೆ ಕಾರನ್ನು ವಶಕ್ಕೆ ಪಡೆದು,ಜಿಂಕೆ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ತಗೆದುಕೊಂಡು ಹೋದರು.ಅರಣ್ಯ ಅಧಿಕಾರಿಗಳು ಹೇಳುವಂತೆ ಕಲ್ಲೂರು ಅರಣ್ಯದಲ್ಲಿ ಜಿಂಕೆಗಳು ದೊಡ್ಡ ಸಂಖ್ಯೆಯಲ್ಲಿದ್ದು ಮಳೆ ಹಿನ್ನಲೆಯಲ್ಲಿ ರಸ್ತೆ ದಾಟಲು ಅರಣ್ಯದಿಂದ ಹೊರಗೆ ಬಂದಿರಬಹುದು ಎಂದು ಶಂಕಿಸಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



