ಶ್ರೀನಿವಾಸಪುರ:ಶ್ರೀನಿವಾಸಪುರದ ಜೀವನಾಡಿ ಮಾವುಬೆಳೆ ಬುಧವಾರ ಸಂಜೆ ಸುರಿದ ಆರ್ಭಟದ ಗಾಳಿ ಸಹಿತ ಆಲಿಕಲ್ಲು ಮಳೆಗೆ ನೆಲದ ಪಾಲಾಗಿದೆ. ಮಾವು ಬೆಳೆ ಇಲ್ಲಿನ ರೈತರ ಬದುಕಿನ ಬೆಳೆಯಾಗಿದೆ.
ತಾಲೂಕಿನ ಕಸಬಾ ಹೋಬಳಿ ಆಲವಾಟ, ದೊಡಮಲದೊಡ್ಡಿ, ಆರಿಕುಂಟೆ, ಚಕ್ಕಾರ್ಲಾಪಲ್ಲಿ ಬಂಡಪಲ್ಲಿ ತಾಡಿಗೊಳ್ ಪಂಚಾಯಿತಿಯ ಕೆಲ ಗ್ರಾಮಗಳು ನೆಲವಂಕಿ ಹೋಬಳಿಯ ಲಕ್ಷ್ಮೀಪುರ ಸೇರಿದಂತೆ ಹಲವು ಗ್ರಾಮಗಳ ವ್ಯಾಪ್ತಿಯ ಮಾವಿನ ಬೆಳೆ ಇಂದು ಸುರಿದ ಗಾಳಿ ಸಹಿತ ಮಳೆಯಿಂದ ಧರೆಗುರಳಿದೆ.
ತಾಪಮಾನ ಹೆಚ್ಚಳದಿಂದ ಮರದಲ್ಲೇ ಬಾಡುತ್ತ ನಿಧಾನಗತಿಯಲ್ಲಿ ಬೆಳವಣಿಗೆ ಆಗುತ್ತಿದ್ದ ಮಾವಿನಬೆಳೆ ಬಿರುಗಾಳಿ ಮಳೆಗೆ ನೆಲಕ್ಕೆ ಉದುರಿ ತೋಟದ ತುಂಬೆಲ್ಲಾ ಹರಡಿದೆ..ಆಲಿಕಲ್ಲು ಬಿದ್ದಿದ್ದರಿಂದ ಗಿಡದಲ್ಲಿ ಉಳಿಯುವ ಕಾಯಿಗಳೂ ಗಾಯಗೊಂಡು ಕಪ್ಪು ಕಲೆಗಳಿಂದ ಹಾಳಾಗುತ್ತವೆ. ರೈತರು ಬಂಡವಾಳ ಕಳೆದುಕೊಂಡು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ.
ಸರ್ಕಾರ ಕೂಡಲೇ ವೈಜ್ಞಾನಿಕ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡುವ ಮೂಲಕ ಮಾವು ಬೆಳೆಗಾರರನ್ನು ರಕ್ಷಿಸುವಂತೆ ರೈತರು ಮನವಿ ಮಾಡಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



