ಶ್ರೀನಿವಾಸಪುರ:ಶ್ರೀನಿವಾಸಪುರದ ಜೀವನಾಡಿ ಮಾವುಬೆಳೆ ಬುಧವಾರ ಸಂಜೆ ಸುರಿದ ಆರ್ಭಟದ ಗಾಳಿ ಸಹಿತ ಆಲಿಕಲ್ಲು ಮಳೆಗೆ ನೆಲದ ಪಾಲಾಗಿದೆ. ಮಾವು ಬೆಳೆ ಇಲ್ಲಿನ ರೈತರ ಬದುಕಿನ ಬೆಳೆಯಾಗಿದೆ.
ತಾಲೂಕಿನ ಕಸಬಾ ಹೋಬಳಿ ಆಲವಾಟ, ದೊಡಮಲದೊಡ್ಡಿ, ಆರಿಕುಂಟೆ, ಚಕ್ಕಾರ್ಲಾಪಲ್ಲಿ ಬಂಡಪಲ್ಲಿ ತಾಡಿಗೊಳ್ ಪಂಚಾಯಿತಿಯ ಕೆಲ ಗ್ರಾಮಗಳು ನೆಲವಂಕಿ ಹೋಬಳಿಯ ಲಕ್ಷ್ಮೀಪುರ ಸೇರಿದಂತೆ ಹಲವು ಗ್ರಾಮಗಳ ವ್ಯಾಪ್ತಿಯ ಮಾವಿನ ಬೆಳೆ ಇಂದು ಸುರಿದ ಗಾಳಿ ಸಹಿತ ಮಳೆಯಿಂದ ಧರೆಗುರಳಿದೆ.
ತಾಪಮಾನ ಹೆಚ್ಚಳದಿಂದ ಮರದಲ್ಲೇ ಬಾಡುತ್ತ ನಿಧಾನಗತಿಯಲ್ಲಿ ಬೆಳವಣಿಗೆ ಆಗುತ್ತಿದ್ದ ಮಾವಿನಬೆಳೆ ಬಿರುಗಾಳಿ ಮಳೆಗೆ ನೆಲಕ್ಕೆ ಉದುರಿ ತೋಟದ ತುಂಬೆಲ್ಲಾ ಹರಡಿದೆ..ಆಲಿಕಲ್ಲು ಬಿದ್ದಿದ್ದರಿಂದ ಗಿಡದಲ್ಲಿ ಉಳಿಯುವ ಕಾಯಿಗಳೂ ಗಾಯಗೊಂಡು ಕಪ್ಪು ಕಲೆಗಳಿಂದ ಹಾಳಾಗುತ್ತವೆ. ರೈತರು ಬಂಡವಾಳ ಕಳೆದುಕೊಂಡು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ.
ಸರ್ಕಾರ ಕೂಡಲೇ ವೈಜ್ಞಾನಿಕ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡುವ ಮೂಲಕ ಮಾವು ಬೆಳೆಗಾರರನ್ನು ರಕ್ಷಿಸುವಂತೆ ರೈತರು ಮನವಿ ಮಾಡಿದ್ದಾರೆ.
Trending
- ಭೈರನದೊಡ್ಡಿ:ನಾಮಧಾರಿ ನಗರ್ತ ಸಮುದಾಯ ಸಮಾವೇಶ
- ಶ್ರೀಶೈಲ ಪುಣ್ಯಕ್ಷೇತ್ರ ಇಷ್ಟಕಾಮೇಶ್ವರಿ ಇಷ್ಟಾರ್ಥ ನೆರವೇರಿಸುವ ದೇವರು!
- ಟನ್ ಮಾವಿಗೆ ಹತ್ತು ಸಾವಿರ ನೀಡಲು ನಿಲಟೂರು ಚಿನ್ನಪ್ಪರೆಡ್ಡಿ ಒತ್ತಾಯ!
- ಮುಖ್ಯಮಂತ್ರಿಗೆ ಅಭಿನಂದಿಸಿ,ಮಾವು ಬೆಳೆಗೆ ಬೆಂಬಲ ಬೆಲೆ ಕೋರಿದ ವೆಂಕಟಶಿವಾರೆಡ್ಡಿ.
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
Sunday, June 14



