ನ್ಯೂಜ್ ಡೆಸ್ಕ್: ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲ್ ನಲ್ಲಿದ್ದ ನಟ ದರ್ಶನ್ ಅವರಿಗೆ ಇಂದು ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು ಈ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿ ದರ್ಶನ್ ಅವರು ನನಗೆ ತುಂಬಾ ಆಪ್ತರಾಗಿದ್ದು ಅವರಿಗೆ ಜಾಮೀನು ಸಿಕ್ಕಿರುವುದು ನನಗೆ ಖುಷಿಯಾಗಿದೆ ಎಂದು ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಚುನಾವಣೆ ಕ್ಯಾಂಪೈನ್ ನಲ್ಲಿರುವ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಮಾಧ್ಯಮಗಳೊಂದಿಗೆ ಮಾತನಾಡಿ ನ್ಯಾಯಾಲಯದಲ್ಲಿ ದರ್ಶನ್ಗೆ ಮಧ್ಯಂತರ ಜಾಮೀನು ಸಿಕ್ಕಿದೆ ಎಂದು ಗೊತ್ತಾಯಿತು. ಅವರು ನನ್ನ ಆಪ್ತರು. ಆತ್ಮೀಯರಾಗಿರುವ ಕಾರಣಕ್ಕೆ ಜಾಮೀನು ಸಿಕ್ಕಿರುವುದು ಸಹಜವಾಗಿಯೇ ಖುಷಿ ತಂದಿದೆ. ಅವರ ಆರೋಗ್ಯ ವಿಚಾರಿಸುತ್ತೇನೆ. ಅಲ್ಲದೆ ಈ ಘಟನೆಗೂ ಮುನ್ನ ಆಗಾಗ ಭೇಟಿಯಾಗುತ್ತಿದ್ದೆವು ಎಂದು ಹೇಳಿದರು.
ಇದೆ ವೇಳೆ ಉಪಚುನಾವಣೆ ಕುರಿತಂತೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಇಡೀ ರಾಜ್ಯವನ್ನು ಅಭಿವೃದ್ಧಿ ಮಾಡಿದ್ದಾರೆ. ಆದರೆ ಬೊಮ್ಮಾಯಿ ರಾಜ್ಯ ಇರಲಿ, ತಮ್ಮ ಕ್ಷೇತ್ರವನ್ನೂ ಸಹ ಅಭಿವೃದ್ಧಿ ಮಾಡಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ 8 ಸಾವಿರ ಮತಗಳ ಲೀಡ್ ಸಿಕ್ಕಿತ್ತು. ಆಗ ಬೊಮ್ಮಾಯಿ ಶೇಂಗಾ ಬೀಜ ತಿನ್ನುತ್ತಿದ್ದರಾ? ಎಂದು ಜಮೀರ್ ಇದೇ ವೇಳೆ ಟೀಕಿಸಿದರು.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Friday, June 13