ನ್ಯೂಜ್ ಡೆಸ್ಕ್: ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲ್ ನಲ್ಲಿದ್ದ ನಟ ದರ್ಶನ್ ಅವರಿಗೆ ಇಂದು ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು ಈ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿ ದರ್ಶನ್ ಅವರು ನನಗೆ ತುಂಬಾ ಆಪ್ತರಾಗಿದ್ದು ಅವರಿಗೆ ಜಾಮೀನು ಸಿಕ್ಕಿರುವುದು ನನಗೆ ಖುಷಿಯಾಗಿದೆ ಎಂದು ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಚುನಾವಣೆ ಕ್ಯಾಂಪೈನ್ ನಲ್ಲಿರುವ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಮಾಧ್ಯಮಗಳೊಂದಿಗೆ ಮಾತನಾಡಿ ನ್ಯಾಯಾಲಯದಲ್ಲಿ ದರ್ಶನ್ಗೆ ಮಧ್ಯಂತರ ಜಾಮೀನು ಸಿಕ್ಕಿದೆ ಎಂದು ಗೊತ್ತಾಯಿತು. ಅವರು ನನ್ನ ಆಪ್ತರು. ಆತ್ಮೀಯರಾಗಿರುವ ಕಾರಣಕ್ಕೆ ಜಾಮೀನು ಸಿಕ್ಕಿರುವುದು ಸಹಜವಾಗಿಯೇ ಖುಷಿ ತಂದಿದೆ. ಅವರ ಆರೋಗ್ಯ ವಿಚಾರಿಸುತ್ತೇನೆ. ಅಲ್ಲದೆ ಈ ಘಟನೆಗೂ ಮುನ್ನ ಆಗಾಗ ಭೇಟಿಯಾಗುತ್ತಿದ್ದೆವು ಎಂದು ಹೇಳಿದರು.
ಇದೆ ವೇಳೆ ಉಪಚುನಾವಣೆ ಕುರಿತಂತೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಇಡೀ ರಾಜ್ಯವನ್ನು ಅಭಿವೃದ್ಧಿ ಮಾಡಿದ್ದಾರೆ. ಆದರೆ ಬೊಮ್ಮಾಯಿ ರಾಜ್ಯ ಇರಲಿ, ತಮ್ಮ ಕ್ಷೇತ್ರವನ್ನೂ ಸಹ ಅಭಿವೃದ್ಧಿ ಮಾಡಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ 8 ಸಾವಿರ ಮತಗಳ ಲೀಡ್ ಸಿಕ್ಕಿತ್ತು. ಆಗ ಬೊಮ್ಮಾಯಿ ಶೇಂಗಾ ಬೀಜ ತಿನ್ನುತ್ತಿದ್ದರಾ? ಎಂದು ಜಮೀರ್ ಇದೇ ವೇಳೆ ಟೀಕಿಸಿದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26