ನ್ಯೂಜ್ ಡೆಸ್ಕ್: ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲ್ ನಲ್ಲಿದ್ದ ನಟ ದರ್ಶನ್ ಅವರಿಗೆ ಇಂದು ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು ಈ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿ ದರ್ಶನ್ ಅವರು ನನಗೆ ತುಂಬಾ ಆಪ್ತರಾಗಿದ್ದು ಅವರಿಗೆ ಜಾಮೀನು ಸಿಕ್ಕಿರುವುದು ನನಗೆ ಖುಷಿಯಾಗಿದೆ ಎಂದು ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಚುನಾವಣೆ ಕ್ಯಾಂಪೈನ್ ನಲ್ಲಿರುವ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಮಾಧ್ಯಮಗಳೊಂದಿಗೆ ಮಾತನಾಡಿ ನ್ಯಾಯಾಲಯದಲ್ಲಿ ದರ್ಶನ್ಗೆ ಮಧ್ಯಂತರ ಜಾಮೀನು ಸಿಕ್ಕಿದೆ ಎಂದು ಗೊತ್ತಾಯಿತು. ಅವರು ನನ್ನ ಆಪ್ತರು. ಆತ್ಮೀಯರಾಗಿರುವ ಕಾರಣಕ್ಕೆ ಜಾಮೀನು ಸಿಕ್ಕಿರುವುದು ಸಹಜವಾಗಿಯೇ ಖುಷಿ ತಂದಿದೆ. ಅವರ ಆರೋಗ್ಯ ವಿಚಾರಿಸುತ್ತೇನೆ. ಅಲ್ಲದೆ ಈ ಘಟನೆಗೂ ಮುನ್ನ ಆಗಾಗ ಭೇಟಿಯಾಗುತ್ತಿದ್ದೆವು ಎಂದು ಹೇಳಿದರು.
ಇದೆ ವೇಳೆ ಉಪಚುನಾವಣೆ ಕುರಿತಂತೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಇಡೀ ರಾಜ್ಯವನ್ನು ಅಭಿವೃದ್ಧಿ ಮಾಡಿದ್ದಾರೆ. ಆದರೆ ಬೊಮ್ಮಾಯಿ ರಾಜ್ಯ ಇರಲಿ, ತಮ್ಮ ಕ್ಷೇತ್ರವನ್ನೂ ಸಹ ಅಭಿವೃದ್ಧಿ ಮಾಡಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ 8 ಸಾವಿರ ಮತಗಳ ಲೀಡ್ ಸಿಕ್ಕಿತ್ತು. ಆಗ ಬೊಮ್ಮಾಯಿ ಶೇಂಗಾ ಬೀಜ ತಿನ್ನುತ್ತಿದ್ದರಾ? ಎಂದು ಜಮೀರ್ ಇದೇ ವೇಳೆ ಟೀಕಿಸಿದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



