ಶ್ರೀನಿವಾಸಪುರ:ಕಲ್ಲೂರಿನ ಗ್ರಾಮದೇವತೆ ಚೌಡೇಶ್ವರಿದೇವಿ ದರ್ಶನ ಪಡೆದು ಪುನೀತನಾದೆ ಅಮ್ಮನ ದರ್ಶನದಿಂದ ನೆಮ್ಮದಿ ಸಿಕ್ಕಿದಂತಾಗಿದೆ ಇದು ನನ್ನ ಪುಣ್ಯ ಎಂದು ತೋಟಗಾರಿಕೆ ಹಾಗು ಕೋಲಾರ ಜಿಲ್ಲೆ ಉಸ್ತವಾರಿ ಸಚಿವ ಮುನಿರತ್ನ ಹೇಳಿದರು ಅವರು ತಾಲೂಕಿನ ಕಸಬಾ ಹೋಬಳಿ ಕಲ್ಲೂರು ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾತನಾಡಿ ನವೀಕರಣವಾಗುತ್ತಿರುವ ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಬೇಕಾದ ರಸ್ತೆ, ಹೈಮಾಸ್ಕ್ ಲೈಟ್ ಸೇರಿದಂತೆ ಮೂಲಭೂತ ಸೌಲಭ್ಯಗಳ ವ್ಯವಸ್ಥೆ ಮಾಡಿಕೊಡುವ ಭರವಸೆ ನೀಡಿದರು.
ಬೆಂಗಳೂರಿನಲ್ಲಿ ಖ್ಯಾತರಾಗಿರುವ ಎಂಡೋಕ್ರೈನಾಲಜಿ ತಜ್ಞ ವೈದ್ಯ ಕಲ್ಲೂರು ಮೂಲದ ಡಾ.ಸೋಮಶೇಖರರೆಡ್ಡಿ ನಮ್ಮ ಕುಟುಂಬಕ್ಕೆ ಆಪ್ತರು ಅವರು ನೀಡಿದ ಆಹ್ವಾನದ ಮೇರೆಗೆ ಇಂದು ಗ್ರಾಮಕ್ಕೆ ಬೇಟಿ ನೀಡಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಸಚಿವರನ್ನು ಗೌರವಿಸಿದರು. ತಹಸೀಲ್ದಾರ್ ಶರೀನ್ತಾಜ್,ಬಿಜೆಪಿ ಜಿಲ್ಲಾಧ್ಯಕ್ಷ ವೇಣುಗೋಪಾಲ್, ಸಚಿವರ ಆಪ್ತ ಡಾ.ಸೋಮಶೇಖರರೆಡ್ಡಿ,ತಾಲೂಕು ಬಿಜೆಪಿ ಅಧ್ಯಕ್ಷ ಅಶೋಕ್ರೆಡ್ಡಿ, ಮುಖಂಡರಾದ ಲಕ್ಷ್ಮಣಗೌಡ,ರಾಮಾಂಜಿ,ರೋಣೂರುಚಂದ್ರು, ಎ.ವೆಂಕಟರೆಡ್ಡಿ, ಕೆ.ಕೆ.ಮಂಜು, ನಿವೃತ್ತ ಉಪನ್ಯಾಸಕ ವಿಚೌಡರೆಡ್ಡಿ ಚಂದ್ರಶೇಖರ್, ಸೀತಾರಾಮರೆಡ್ಡಿ,ಫಾರೆಸ್ಟರ್ಅಶ್ವತ್ಥರೆಡ್ಡಿ ನಾರಾಯಣಸ್ವಾಮಿ, ರತ್ನಪ್ಪ, ರಾಮಕೃಷ್ಣಾರೆಡ್ಡಿ ಮುಂತಾದವರು ಇದ್ದರು.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27