ಶ್ರೀನಿವಾಸಪುರ: ಪ್ರೌಡಶಾಲಾ ವಿಧ್ಯಾರ್ಥಿಯ ಬೈಕ್ ವೀಲಿಂಗ್ ಹುಚ್ವಾಟಕ್ಕೆ ಏಳು ಮಂದಿ ವಿಧ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿಸ್ಥೆ ಪಡೆಯುತ್ತಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ KSRTC ಬಸ್ ಡಿಪೋ ಬಳಿ ಶ್ರೀನಿವಾಸಪುರದ ಪ್ರತಿಷ್ಟಿತ ವೇಣು ಶಾಲೆಯಲ್ಲಿ ಓದುತ್ತಿರುವ ಪ್ರೌಡಶಾಲಾ ವಿಧ್ಯಾರ್ಥಿ ಸೂರ್ಯ ತಾನು ತಂದಿದ್ದ ಪಲ್ಸರ್ ಬೈಕ್ ನಲ್ಲಿ ತನ್ನ ಇಬ್ಬರು ಸ್ನೇಹಿತರನ್ನು ಕೂರಿಸಿಕೊಂಡು ನಡು ರಸ್ತೆಯಲ್ಲಿ ಬೈಕ್ ವೀಲಿಂಗ್ ಮಾಡುತ್ತ ಸ್ಟಂಟ್ ಮಾಡಿಕೊಂಡು ಬೈಕ್ ಚಲಾಯಿಸಿಕೊಂಡು ಹೋಗಿರುತ್ತಾನೆ ಈ ಸಂದರ್ಭದಲ್ಲಿ ಆಯಾತಪ್ಪಿದ ಬೈಕ್ ರಸ್ತೆಯಲ್ಲಿ ಹೋಗುತ್ತಿದ್ದ ವಿಧ್ಯಾರ್ಥಿಗಳ ಮೇಲೆ ಹರಿದಿದೆ ಘಟನೆಯಿಂದ ಏಳು ವಿಧ್ಯಾರ್ಥಿನಿಯರು ಮತ್ತು ಬೈಕ್ ಸವಾರ ಸೂರ್ಯ ಹಾಗು ಹಿಂಬದಿ ಕುಳಿತಿದ್ದ ಇಬ್ಬರು ವಿಧ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆ ಹಾಗು ಖಾಸಗಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ.
ಲಿಖಿತ ಎನ್ನುವ ವಿಧ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದು ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ತಡರಾತ್ರಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಿರುವುದಾಗಿ ಹೇಳಲಾಗಿದೆ.
ಘಟನ ಸ್ಥಳಕ್ಕೆ ಶ್ರೀನಿವಾಸಪುರ ಇನ್ಸ್ಪೇಕ್ಟರ್ ರವಿಕುಮಾರ್ ಭೇಟಿ ನೀಡಿ ಮಾಹಿತಿ ಪಡೆದು ಬೈಕ್ ಅನ್ನು ವಶಕ್ಕೆ ಪಡೆದಿರುತ್ತಾರೆ. ಈ ಸಂಬಂಧ ವಿಧ್ಯಾರ್ಥಿ ಸೂರ್ಯ ಪೋಷಕರ ವಿರುದ್ದ ದೂರುದಾಖಲಿಸುವುದಾಗಿ ಹೇಳಿರುತ್ತಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14