ಶ್ರೀನಿವಾಸಪುರ: ಪ್ರೌಡಶಾಲಾ ವಿಧ್ಯಾರ್ಥಿಯ ಬೈಕ್ ವೀಲಿಂಗ್ ಹುಚ್ವಾಟಕ್ಕೆ ಏಳು ಮಂದಿ ವಿಧ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿಸ್ಥೆ ಪಡೆಯುತ್ತಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ KSRTC ಬಸ್ ಡಿಪೋ ಬಳಿ ಶ್ರೀನಿವಾಸಪುರದ ಪ್ರತಿಷ್ಟಿತ ವೇಣು ಶಾಲೆಯಲ್ಲಿ ಓದುತ್ತಿರುವ ಪ್ರೌಡಶಾಲಾ ವಿಧ್ಯಾರ್ಥಿ ಸೂರ್ಯ ತಾನು ತಂದಿದ್ದ ಪಲ್ಸರ್ ಬೈಕ್ ನಲ್ಲಿ ತನ್ನ ಇಬ್ಬರು ಸ್ನೇಹಿತರನ್ನು ಕೂರಿಸಿಕೊಂಡು ನಡು ರಸ್ತೆಯಲ್ಲಿ ಬೈಕ್ ವೀಲಿಂಗ್ ಮಾಡುತ್ತ ಸ್ಟಂಟ್ ಮಾಡಿಕೊಂಡು ಬೈಕ್ ಚಲಾಯಿಸಿಕೊಂಡು ಹೋಗಿರುತ್ತಾನೆ ಈ ಸಂದರ್ಭದಲ್ಲಿ ಆಯಾತಪ್ಪಿದ ಬೈಕ್ ರಸ್ತೆಯಲ್ಲಿ ಹೋಗುತ್ತಿದ್ದ ವಿಧ್ಯಾರ್ಥಿಗಳ ಮೇಲೆ ಹರಿದಿದೆ ಘಟನೆಯಿಂದ ಏಳು ವಿಧ್ಯಾರ್ಥಿನಿಯರು ಮತ್ತು ಬೈಕ್ ಸವಾರ ಸೂರ್ಯ ಹಾಗು ಹಿಂಬದಿ ಕುಳಿತಿದ್ದ ಇಬ್ಬರು ವಿಧ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆ ಹಾಗು ಖಾಸಗಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ.
ಲಿಖಿತ ಎನ್ನುವ ವಿಧ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದು ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ತಡರಾತ್ರಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಿರುವುದಾಗಿ ಹೇಳಲಾಗಿದೆ.
ಘಟನ ಸ್ಥಳಕ್ಕೆ ಶ್ರೀನಿವಾಸಪುರ ಇನ್ಸ್ಪೇಕ್ಟರ್ ರವಿಕುಮಾರ್ ಭೇಟಿ ನೀಡಿ ಮಾಹಿತಿ ಪಡೆದು ಬೈಕ್ ಅನ್ನು ವಶಕ್ಕೆ ಪಡೆದಿರುತ್ತಾರೆ. ಈ ಸಂಬಂಧ ವಿಧ್ಯಾರ್ಥಿ ಸೂರ್ಯ ಪೋಷಕರ ವಿರುದ್ದ ದೂರುದಾಖಲಿಸುವುದಾಗಿ ಹೇಳಿರುತ್ತಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



