ಶ್ರೀನಿವಾಸಪುರ:ಕಿಡಿಗೇಡಿಗಳು ಹಾಕಿದ ಬೆಂಕಿಗೆ ಮೊಬೈಲ್ ಅಂಗಡಿಗಳ ಸೈನ್ ಬೋರ್ಡ್ ಸೇರಿದಂತೆ ನಾಮಫಲಕಳು ವಿದ್ಯತ್ ತಂತಿಗಳು ಸುಟ್ಟು ಕರಕಲಾಗಿರುವ ಘಟನೆ ಶ್ರೀನಿವಾಸಪುರ ಪಟ್ಟಣದ ಜೆ.ಸಿ.ರಸ್ತೆಯ ಪುರಸಭೆ ವಾಣಿಜ್ಯ ಮಳಿಗೆಗಳಲ್ಲಿರುವ ರಜನಿ ಮೋಬೈಲ್ ಅಂಗಡಿಯಲ್ಲಿ ನಡೆದಿದ್ದು ಅದೃಷವತ್ ಪ್ರಾಣ ಹಾನಿಯಂತಹವು ನಡೆದಿಲ್ಲ ಸಮಯಕ್ಕೆ ಅಗ್ನಿ ಶಾಮಕ ದಳ ಕಾರ್ಯಚರಣೆ ನಡೆಸಿದ ಪರಿಣಾಮ ದೊಡ್ದ ಮಟ್ಟದ ನಷ್ಟ ಸಹ ಆಗಿರುವುದಿಲ್ಲ.
ಜೆ.ಸಿ.ರಸ್ತೆಯಲ್ಲಿರುವ ಪುರಸಭೆ ವಾಣಿಜ್ಯ ಮಳಿಗೆಗಳಲ್ಲಿ ಮಹಡಿ ಏರಲು ಇರುವಂತ ಮೆಟ್ಟಿಲ ಕೆಳಗೆ ಹಣ್ಣುಗಳ ಅಂಗಡಿಯ ಮರದ ಟೆಬಲ್ ಕೆಳಗೆ ಕೂತಿರುವ ಕಿಡಿಗೇಡಿಗಳು ಶನಿವಾರ ತಡ ರಾತ್ರಿ ಚಳಿಕಾಯಿಸಲು ಬೆಂಕಿಹಾಕಿದ್ದು ನಂತರ ಅದನ್ನು ನಿರ್ಲಕ್ಷಿಸಿ ಹೋಗಿದ್ದಾರೆ ಉರಿಯುತ್ತಿದ್ದ ಬೆಂಕಿ ರಜನಿ ಮೊಬೈಲ್ ಅಂಗಡಿಯ ಪ್ಲಾಸ್ಟಿಕ್ ಸೈನ್ ಬೋರ್ಡ್ ಗೆ ತಾಕಿ ಅಂಗಡಿ ಮುಂದಿನ ಎಲ್ಲಾ ಪ್ಲಾಸಟಿಕ್ ಬೋರ್ಡ್ ಗಳು ಸುಟ್ಟಿದೆ ಅಲ್ಲೆ ಹಾದು ಹೋಗಿರುವ ಬೆಸ್ಕಾಂ ಮೈನ್ ವಿದ್ಯತ್ ತಂತಿಗೂ ಹೊತ್ತಿಕೊಂಡು ಸುಟ್ಟಿದೆ ಎಂದು ಹೇಳಲಾಗಿದ್ದು ತಡ ರಾತ್ರಿಯಲ್ಲಿ ಬೆಂಕಿ ದೃಶ್ಯ ಕಂಡವರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಪರಿಣಾಮ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿರುತ್ತಾರೆ ಇದರಿಂದಾಗಿ ದೊಡ್ಡ ಮಟ್ಟದ ಅನಾಹುತ ತಪ್ಪಿರುತ್ತದೆ ಈ ಬಗ್ಗೆ ಶ್ರೀನಿವಾಸಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26