ಶ್ರೀನಿವಾಸಪುರ:ಕಿಡಿಗೇಡಿಗಳು ಹಾಕಿದ ಬೆಂಕಿಗೆ ಮೊಬೈಲ್ ಅಂಗಡಿಗಳ ಸೈನ್ ಬೋರ್ಡ್ ಸೇರಿದಂತೆ ನಾಮಫಲಕಳು ವಿದ್ಯತ್ ತಂತಿಗಳು ಸುಟ್ಟು ಕರಕಲಾಗಿರುವ ಘಟನೆ ಶ್ರೀನಿವಾಸಪುರ ಪಟ್ಟಣದ ಜೆ.ಸಿ.ರಸ್ತೆಯ ಪುರಸಭೆ ವಾಣಿಜ್ಯ ಮಳಿಗೆಗಳಲ್ಲಿರುವ ರಜನಿ ಮೋಬೈಲ್ ಅಂಗಡಿಯಲ್ಲಿ ನಡೆದಿದ್ದು ಅದೃಷವತ್ ಪ್ರಾಣ ಹಾನಿಯಂತಹವು ನಡೆದಿಲ್ಲ ಸಮಯಕ್ಕೆ ಅಗ್ನಿ ಶಾಮಕ ದಳ ಕಾರ್ಯಚರಣೆ ನಡೆಸಿದ ಪರಿಣಾಮ ದೊಡ್ದ ಮಟ್ಟದ ನಷ್ಟ ಸಹ ಆಗಿರುವುದಿಲ್ಲ.
ಜೆ.ಸಿ.ರಸ್ತೆಯಲ್ಲಿರುವ ಪುರಸಭೆ ವಾಣಿಜ್ಯ ಮಳಿಗೆಗಳಲ್ಲಿ ಮಹಡಿ ಏರಲು ಇರುವಂತ ಮೆಟ್ಟಿಲ ಕೆಳಗೆ ಹಣ್ಣುಗಳ ಅಂಗಡಿಯ ಮರದ ಟೆಬಲ್ ಕೆಳಗೆ ಕೂತಿರುವ ಕಿಡಿಗೇಡಿಗಳು ಶನಿವಾರ ತಡ ರಾತ್ರಿ ಚಳಿಕಾಯಿಸಲು ಬೆಂಕಿಹಾಕಿದ್ದು ನಂತರ ಅದನ್ನು ನಿರ್ಲಕ್ಷಿಸಿ ಹೋಗಿದ್ದಾರೆ ಉರಿಯುತ್ತಿದ್ದ ಬೆಂಕಿ ರಜನಿ ಮೊಬೈಲ್ ಅಂಗಡಿಯ ಪ್ಲಾಸ್ಟಿಕ್ ಸೈನ್ ಬೋರ್ಡ್ ಗೆ ತಾಕಿ ಅಂಗಡಿ ಮುಂದಿನ ಎಲ್ಲಾ ಪ್ಲಾಸಟಿಕ್ ಬೋರ್ಡ್ ಗಳು ಸುಟ್ಟಿದೆ ಅಲ್ಲೆ ಹಾದು ಹೋಗಿರುವ ಬೆಸ್ಕಾಂ ಮೈನ್ ವಿದ್ಯತ್ ತಂತಿಗೂ ಹೊತ್ತಿಕೊಂಡು ಸುಟ್ಟಿದೆ ಎಂದು ಹೇಳಲಾಗಿದ್ದು ತಡ ರಾತ್ರಿಯಲ್ಲಿ ಬೆಂಕಿ ದೃಶ್ಯ ಕಂಡವರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಪರಿಣಾಮ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿರುತ್ತಾರೆ ಇದರಿಂದಾಗಿ ದೊಡ್ಡ ಮಟ್ಟದ ಅನಾಹುತ ತಪ್ಪಿರುತ್ತದೆ ಈ ಬಗ್ಗೆ ಶ್ರೀನಿವಾಸಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23


