ಶ್ರೀನಿವಾಸಪುರ:ಆಂಧ್ರಪ್ರದೇಶದ ಅಸೆಂಬ್ಲಿ ಸಮಾವೇಶ ನಡೆಯುತ್ತಿದೆ ಈ ಸಂದರ್ಭದಲ್ಲಿ ಶ್ರೀನಿವಾಸಪುರದ ಶಾಸಕ ವೆಂಕಟಶಿವಾರೆಡ್ಡಿ ಅವರು ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪುತ್ರ ಹಾಗು ಐಟಿ ಮತ್ತು ಮಾನವ ಸಂಪನ್ಮೂಲ ಸಚಿವ ಲೋಕೆಶ್ ಅವರನ್ನು ವಿಜಯವಾಡದ ವೆಲಗಪುಡಿಯಲ್ಲಿರುವ ವಿಧಾನಸಭಾ ಸಚಿವಾಲಯದಲ್ಲಿ ಭೇಟಿಯಾಗಿ ನೂತನ ಸರ್ಕಾರಕ್ಕೆ ಹಳದಿ ಬಣ್ಣದ ಹೂಗುಚ್ಚ ನೀಡಿ ಶುಭಕೋರಿದ್ದಾರೆ.
ನಂತರ ಇಬ್ಬರು ಚರ್ಚೆ ನಡೆಸಿದ್ದು ಕರ್ನಾಟಕ-ಆಂಧ್ರ ಗಡಿಯಂಚಿನ ಭಾಗದ ರಸ್ತೆಗಳ ಅಭಿವೃದ್ಧಿ ನೀರಾವರಿ ಹಾಗು ರೈಲ್ವೆಮಾರ್ಗಗಳ ಕುರಿತಂತೆ ಚರ್ಚೆ ನಡೆಸಿರುವುದಾಗಿ ತಿಳಿದು ಬಂದಿದೆ. ಆಂಧ್ರ ಅಸೆಂಬ್ಲಿ ಸಮಾವೇಶದ ನಡೆಯುತ್ತಿದ್ದು ಆಂಧ್ರ ಬಡ್ಜೆಟ್ ಮಂಡನೆಯಾಗುವ ಸಂದರ್ಭದಲ್ಲಿ ಇಬ್ಬರ ಭೇಟಿ ಮಹತ್ವ ಪಡೆದುಕೊಂಡಿದೆ.
ಇತ್ತಿಚಿಗೆ ನಡೆದಂತ ಆಂಧ್ರಪ್ರದೇಶದ ಚುನಾವಣೆ ವಿಚಾರವಾಗಿ ತಮ್ಮ ಆಪ್ತರ ಬಳಿ ಈ ಬಾರಿ ಆಂಧ್ರದಲ್ಲಿ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ ಚಂದ್ರಬಾಬುನಾಯ್ಡು ನಾಲ್ಕನೆ ಬಾರಿಗೆ ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ವೆಂಕಟಶಿವಾರೆಡ್ಡಿ ಭವಿಷ್ಯ ನುಡಿದಿದ್ದರು.
Trending
- ಹಿಂದುಳಿದ ಜಾತಿಗಳ ಜನಜಾಗೃತಿ ಸಮಾವೇಶಕ್ಕೆ ಶ್ರೀನಿವಾಸಪುರದಿಂದ ಜನ!
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
Sunday, September 6



