ಶ್ರೀನಿವಾಸಪುರ:ಅಪರಿಚಿತ ವಾಹನ ಬಡಿದು ದ್ವಿಚಕ್ರ ವಾಹನದಲ್ಲಿ ಊರಿಗೆ ತೆರಳುತ್ತಿದ್ದ ತಾಯಿ ಮಗ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಮಂಗಳವಾರ ರಾತ್ರಿ 8 ಗಂಟೆ ಸಮಯದಲ್ಲಿ ಪಟ್ಟಣದ ಹೊರ ವಲಯದಲ್ಲಿ ಶ್ರೀನಿವಾಸಪುರ-ಮುಳಬಾಗಿಲು ರಸ್ತೆಯಲ್ಲಿ ಪುರಸಭೆ ಕಟ್ಟಡದ ಬಳಿ ನಡೆದಿರುತ್ತದೆ.
ಮೃತರನ್ನು ಶ್ರೀನಿವಾಸಪುರ ತಾಲ್ಲೂಕಿನ ಕೇತಗಾನಹಳ್ಳಿ ಗ್ರಾಮದ ಪದ್ಮಮ್ಮ(48)ಹಾಗು ಅವರ ಮಗ ರಘು(22)ಎಂದು ಗುರುತಿಸಲಾಗಿದೆ.ಪದ್ಮಮ್ಮನಿಗೆ ಮೈಯಲ್ಲಿ ಹುಷಾರಿಲ್ಲ ಎಂದು ಮಗ ರಘು ಜೋತೆ ದ್ವಿಚಕ್ರ ವಾಹನದಲ್ಲಿ ಶ್ರೀನಿವಾಸಪುರಕ್ಕೆ ಆಗಮಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಊರಿಗೆ ಹೋಗುತ್ತಿರುವಾಗ ಎದರುಗಡೆಯಿಂದ ಬಂದಂತ ಬೊಲೊರೋ ವಾಹನ ಡಿಕ್ಕಿ ಹೋಡೆದ ಪರಿಣಾಮ ಅಪಘಾತ ಆಗಿದೆ ಎಂದು ಹೇಳಲಾಗುತ್ತಿದೆ ಡಿಕ್ಕಿ ಹೊಡೆದ ವಾಹನ ನಿಲ್ಲಿಸದೆ ಹೋರಟು ಹೋಗಿದ್ದು ಅಪರಿಚಿತ ವಾಹನದ ಪತ್ತೆಗಾಗಿ ಪೊಲೀಸರು ಹಾದಿಯಲ್ಲಿರುವಂತ ಸಿಸಿ ಕ್ಯಾಮೆರಾಗಳ ಪರಿಶೀಲನೆಗೆ ಮುಂದಾಗಿದ್ದಾರೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



