ಶ್ರೀನಿವಾಸಪುರ:ಅಪರಿಚಿತ ವಾಹನ ಬಡಿದು ದ್ವಿಚಕ್ರ ವಾಹನದಲ್ಲಿ ಊರಿಗೆ ತೆರಳುತ್ತಿದ್ದ ತಾಯಿ ಮಗ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಮಂಗಳವಾರ ರಾತ್ರಿ 8 ಗಂಟೆ ಸಮಯದಲ್ಲಿ ಪಟ್ಟಣದ ಹೊರ ವಲಯದಲ್ಲಿ ಶ್ರೀನಿವಾಸಪುರ-ಮುಳಬಾಗಿಲು ರಸ್ತೆಯಲ್ಲಿ ಪುರಸಭೆ ಕಟ್ಟಡದ ಬಳಿ ನಡೆದಿರುತ್ತದೆ.
ಮೃತರನ್ನು ಶ್ರೀನಿವಾಸಪುರ ತಾಲ್ಲೂಕಿನ ಕೇತಗಾನಹಳ್ಳಿ ಗ್ರಾಮದ ಪದ್ಮಮ್ಮ(48)ಹಾಗು ಅವರ ಮಗ ರಘು(22)ಎಂದು ಗುರುತಿಸಲಾಗಿದೆ.ಪದ್ಮಮ್ಮನಿಗೆ ಮೈಯಲ್ಲಿ ಹುಷಾರಿಲ್ಲ ಎಂದು ಮಗ ರಘು ಜೋತೆ ದ್ವಿಚಕ್ರ ವಾಹನದಲ್ಲಿ ಶ್ರೀನಿವಾಸಪುರಕ್ಕೆ ಆಗಮಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಊರಿಗೆ ಹೋಗುತ್ತಿರುವಾಗ ಎದರುಗಡೆಯಿಂದ ಬಂದಂತ ಬೊಲೊರೋ ವಾಹನ ಡಿಕ್ಕಿ ಹೋಡೆದ ಪರಿಣಾಮ ಅಪಘಾತ ಆಗಿದೆ ಎಂದು ಹೇಳಲಾಗುತ್ತಿದೆ ಡಿಕ್ಕಿ ಹೊಡೆದ ವಾಹನ ನಿಲ್ಲಿಸದೆ ಹೋರಟು ಹೋಗಿದ್ದು ಅಪರಿಚಿತ ವಾಹನದ ಪತ್ತೆಗಾಗಿ ಪೊಲೀಸರು ಹಾದಿಯಲ್ಲಿರುವಂತ ಸಿಸಿ ಕ್ಯಾಮೆರಾಗಳ ಪರಿಶೀಲನೆಗೆ ಮುಂದಾಗಿದ್ದಾರೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



