ಮುಳಬಾಗಿಲು:ಮುಳಬಾಗಿಲು ನಗರದ ಮುತ್ಯಾಲಪೆಟೆಯಲ್ಲಿರುವ ಪ್ರಖ್ಯಾತ ಗಂಗಮ್ಮ ದೇವಾಲಯದ ಅವರಣದಲ್ಲಿ ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಮಾಡಿರುವ ಘಟನೆ ಮುಂಜಾನೆ ನಸುಕಿನಲ್ಲಿ ನಡೆದಿದೆ.
ದುಷ್ಕರ್ಮಿಗಳಿಂದ ಹತ್ಯೆಯಾದ ವ್ಯಕ್ತಿಯನ್ನು ಮುಳಬಾಗಿಲು ನಗರಸಭೆ ಸದಸ್ಯ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ (50) ಎಂದು ಗುರುತಿಸಲಾಗಿದೆ ನಗರದ ಮತ್ಯಾಲಪೇಟೆಯಲ್ಲಿ ತಮ್ಮ ನಿವಾಸದ ಬಳಿಯಿರುವ ಗಂಗಮ್ಮ ದೇವಾಲಯಕ್ಕೆ ಮುಂಜಾನೆ ೫ ಗಂಟೆ ಸಮಯದಲ್ಲಿ ಜಗನಮೋಹನ್ ರೆಡ್ಡಿ ಹೋಗಿರುತ್ತಾರೆ ಈ ಸಂದರ್ಭದಲ್ಲಿ ಹೊರಗೆ ಕಾಯುತ್ತಿದ್ದ ದುಷ್ಕರ್ಮಿಗಳು ರೆಡ್ಡಿ ಮೇಲೆ ಲಾಂಗು, ಮಚ್ಚುಗಳಿಂದ ದಾಳಿಮಾಡಿ ಕೊಲೆಗೈದು ಪರಾರಿಯಾಗಿರುತ್ತಾರೆ.
ಪೂಜೆ ಮಾಡುಲು ಹೋಗಿದ್ದರು
ಜಗನ್ ಮೋಹನ್ ರೆಡ್ಡಿ ಗಂಗಮ್ಮನಿಗೆ ಪೂಜೆ ಸಲ್ಲಿಸಲು ಹೋಗಿದ್ದು ಪೂಜೆ ಮುಗಿಸಿ ಹೊರಬರುತ್ತಿದ್ದಂತೆ ಆತನ ಮೇಲೆ ಎರಗಿರುವ ದುಷ್ಕರ್ಮಿಗಳು ಮರಾಕಾಸ್ತ್ರಗಳಿಂದ ಹತ್ಯೆಮಾಡಿರುತ್ತಾರೆ. ಹತ್ಯೆಯ ದೃಶ್ಯಾವಳಿಗಳು ಸ್ಥಳೀಯ ಸಿಸಿ ಕೆಮೆರಾಗಳಲ್ಲಿ ಸೆರೆಯಾಗಿದೆ ಎನ್ನಲಾಗುತ್ತಿದೆ.
ಮುಳಬಾಗಲು ತಾಲೂಕು ಆವಣಿ ಮೂಲದವರಾದ ಜಗನ್ ಮೋಹನ್ ರೆಡ್ಡಿ ಎರಡನೆ ಬಾರಿಗೆ ನಗರಸಭಾ ಸದಸ್ಯನಾಗಿ ಮಾಜಿ ಶಾಸಕ ಕೊತ್ತೂರು ಮಂಜುನಾಥ ಆಪ್ತನಾಗಿದ್ದ ಹಾಗು ಹಾಲಿ ಶಾಸಕ ಎಚ್.ನಾಗೇಶ್ ಜೊತೆಗೂ ರಾಜಕೀಯ ನಂಟು ಹೊಂದಿದ್ದ
ರಿಯಲ್ ಎಸ್ಟೇಟ್ ಸೇರಿದಂತೆ ವಿವಿಧ ರೀತಿಯ ಸೆಟ್ಲಮೆಂಟ್ ಗಳಲ್ಲಿ ತೊಡಗಿಸಿಕೊಂಡಿದ್ದ ಪೋಲಿಸ್ ದಾಖಲೆಗಳಲ್ಲೂ ಇತನ ಬಗ್ಗೆ ಕ್ರಿಮಿನಲ್ ಪ್ರಕರಣಗಳಲ್ಲಿವೆ ಎನ್ನುತ್ತಾರೆ ಪೋಲಿಸರು.
ಶವವನ್ನು ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು ಹತ್ಯೆ ಹಿನ್ನಲೆಯಲ್ಲಿ ಮುಳಬಾಗಲು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28