ಶ್ರೀನಿವಾಸಪುರ:- ಸಂತೇಗಳಲ್ಲಿ ಕುರಿ ವ್ಯಾಪಾರ ಮಾಡುತ್ತಿದ್ದ ಕುರಿ ವ್ಯಾಪಾರಸ್ಥನನ್ನು ಪಟ್ಟಣದ ಹೊರ ವಲಯದ ಮಾವಿನ ತೋಟದಲ್ಲಿ ಕತ್ತು ಕೊಯ್ದು ದಾರುಣವಾಗಿ ಹತ್ಯೆ ಮಾಡಿರುವ ಘಟನೆ ನಡೆದಿರುತ್ತದೆ.
ಹತ್ಯೆಯಾದ ವ್ಯಕ್ತಿಯನ್ನು ತಾಲೂಕಿನ ಕಸಬಾ ಹೋಬಳಿ ಗುಂಡಮನತ್ತ ಗ್ರಾಮದ ಮುನಿಶಾಮಿ(65) ಎಂದು ಗುರುತಿಸಲಾಗಿದೆ ಸಂತೇಗಳಲ್ಲಿ ಕುರಿ ವ್ಯಾಪಾರ ಮಾಡುತ್ತಿದ್ದು ವ್ಯಕ್ತಿಯ ಜೇಬಿನಲ್ಲಿ ಸದಾಕಾಲ ಹತ್ತಾರು ಸಾವಿರ ನಗದು ಇರುತಿತ್ತು ಎಂದು ಹೇಳಲಾಗಿದೆ.
ಇಂದು ಗುಂಡಮನತ್ತ ಗ್ರಾಮದ ಮನೆಯಿಂದ ಹೊರಟ ಮುನಿಶಾಮಿ ಮಧ್ಯಾಹ್ನ ಹೊತ್ತಿಗೆ ಬಸ್ ನಿಲ್ದಾಣದ ಬಳಿಯಿಂದ ತಮ್ಮ ಬಂಧು ಯುವಕನ ದ್ವಿಚಕ್ರ ವಾಹನದಲ್ಲಿ ಚಿಂತಾಮಣಿ ವೃತ್ತಕ್ಕೆ ಡ್ರಾಪ್ ಪಡೆದುಕೊಂಡಿದ್ದಾರೆ ನಂತರ ಏನಾಯಿತು ಎಂಬ ಮಾಹಿತಿ ಯಾರಿಗೂ ಇಲ್ಲ ನಂತರ ಸಂಜೆ ಹೊತ್ತಿಗೆ ಪಟ್ಟಣದ ಹೊರ ವಲಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಹಾಗು ಇಂದಿರಾ ನಗರದ ಹಿಂಬಾಗದ ನೂರ್ ಎಂಬುವರ ಮಾವಿನ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದು ಹಂತಕರು ಆತನ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಸುದ್ದಿ ಹೊರಬಿದ್ದಿದೆ ಈ ಬಗ್ಗೆ ಮಾಹಿತಿ ಪಡೆದ ಪೋಲಿಸರು ಮುಳಬಾಗಿಲು ಡಿ.ವೈ.ಎಸ್.ಪಿ ಗಿರಿ ಹಾಗು ಪೋಲಿಸ್ ಇನ್ಸ್ ಪೇಕ್ಟರ್ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಶೀಲನೆ ನಡೆಸಿರುತ್ತಾರೆ. ಮೃತನ ಮಗ ಗೋಪಾಲ್ ಈ ಸಂಬಂಧ ಶ್ರೀನಿವಾಸಪುರ ಠಾಣೆಯಲ್ಲಿ ದೂರು ದಾಖಲಿಸಿರುತ್ತಾನೆ.
ಹತ್ಯೆಯಾದ ಸ್ಥಳಕ್ಕೆ ಪೋಲಿಸ್ ಶ್ವಾನಗಳನ್ನು ಕರೆಯಿಸಿದ್ದು ಶ್ವಾನಗಳು ಹತ್ಯೆಯಾದ ಜಾಗದಿಂದ ತೋಟಗಳ ಮದ್ಯೆ ಹಾದು ಚಿಂತಾಮಣಿ-ಕೋಲಾರ ರಸ್ತೆಗಳ ನಡುವಿನ ಬೈಪಾಸ್ ರಸ್ತೆಯಲ್ಲಿ ಸಾಗಿ ಮುಂದೆ ನಂಬಿಹಳ್ಳಿ ಗೆಟ್ ಬಳಿಯವರಿಗೂ ಹೋಗಿ ವಾಪಸ್ಸಾಗಿವೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



