ನ್ಯೂಜ್ ಡೆಸ್ಕ್:ಬೆಂಗಳುರು ನಗರದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಾರ್ಚ್ 30 ರಿಂದ ನ್ಯಾಷನಲ್ ಕಾಮನ್ ಮೊಬಲಿಟಿ ಕಾರ್ಡ್ (ಎನ್ಸಿಎಂಸಿ) ಪ್ರಯಾಣಿಕರಿಗೆ ಲಭ್ಯವಾಗಲಿದೆ. ಬೆಂಗಳೂರು ಮೆಟ್ರೋ ರೈಲ್ವೆ ನಿಗಮ(ಬಿಎಂಆರ್ಸಿಎಲ್) ನೂತನ ವ್ಯವಸ್ಥೆಯನ್ನು ಜನರಿಗೆ ನೀಡಿದೆ. ಒಂದು ದೇಶ, ಒಂದು ಕಾರ್ಡ್ ಘೋಷಣೆ ಅಡಿ ಈ ನೂತನ ವ್ಯವಸ್ಥೆ ಜಾರಿ ಮಾಡಲಾಗಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮ ಆರ್ಬಿಎಲ್ ಬ್ಯಾಂಕ್ ಸಹಯೋಗದಲ್ಲಿ ರುಪೇ ಎನ್ಸಿಎಂಸಿ ಕಾರ್ಡ್ ಪೂರೈಕೆಗೆ ಒಡಂಬಡಿಕೆ ಮಾಡಿಕೊಂಡಿದ್ದು ಕಾರ್ಡನ್ನು ಡೆಬಿಟ್, ಕ್ರೆಡಿಟ್ ಕಾರ್ಡ್ನಂತೆ ರಿಚಾರ್ಜ್ ಮಾಡಿಸಿಕೊಂಡು ಮೆಟ್ರೋದಲ್ಲಿ ಪ್ರಯಾಣ ಮಾಡಬಹುದಾಗಿದೆ ಕೇವಲ ಮೆಟ್ರೋ ಅಷ್ಟೇ ಅಲ್ಲದೇ ಮೆಟ್ರೋದಿಂದ ಹೊರೆಗೂ ಕಾರ್ಡ್ ಅನ್ನು ಬಳಕೆ ಮಾಡಬಹುದು. ಕಾರ್ಡ್ ಬಳಸಿ ಶಾಪಿಂಗ್, ಇಂಧನ ಖರೀದಿ, ಟೋಲ್ ಶುಲ್ಕ ಪಾವತಿ ಸೇರಿದಂತೆ ಇತರೆ ಪಾವತಿಗಳನ್ನು ಮಾಡಬಹುದಾಗಿದೆ ಎನ್ನಲಾಗಿದ್ದು ಕಾರ್ಡ್ ಬಳಕೆಗಾಗಿ ನಗರದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಆರ್ಬಿಎಲ್ ಬ್ಯಾಂಕ್ ನಿಂದ ಪಿಓಎಸ್ ಮೆಷಿನ್ ಗಳ ವ್ಯವಸ್ಥೆ ಮಾಡಲಾಗಿದೆ. ನಗರದ 6 ಲಕ್ಷಕ್ಕೂ ಹೆಚ್ಚಿನ ಮೆಟ್ರೋ ಪ್ರಯಾಣಿಕರಿಗೆ ಈ ಕಾರ್ಡ್ ಬಳಕೆಗೆ ಲಭ್ಯವಾಗಲಿದೆ.ನಿಲ್ದಾಣಗಳಲ್ಲಿ ಹಾಗೂ ಆರ್ಬಿಎಲ್ ಬ್ಯಾಂಕ್ನ MoBank ಆ್ಯಪ್ ಮೂಲಕವೂ ಎನ್ಸಿಎಂಸಿ ಕಾರ್ಡನ್ನು ರಿಚಾರ್ಜ್ ಮಾಡಿಕೊಳ್ಳಬಹುದಂತೆ.
ಕಾರ್ಡಿನ ವಿಶೇಷತೆಗಳೇನು?
ಕಾರ್ಡ್ ಮೂಲಕ ರಿಚಾರ್ಜ್ ಸಾಧ್ಯ.ಕಾರ್ಡ್ ಬಳಕೆ ಮಾಡಿ ಪೆಟ್ರೋಲ್, ಡಿಸೇಲ್ ತುಂಬಿಸಿಕೊಳ್ಳಬಹುದು.
ಶಾಪಿಂಗ್, ಟೋಲ್, ಪಾರ್ಕಿಂಗ್ ಪಾವತಿ ಕೂಡ ಮಾಡಬಹುದಾಗಿದ್ದು ಕಾರ್ಡ್ ಅನ್ನು ಮೆಟ್ರೋ ನಿಲ್ದಾಣ ಮತ್ತು ಮೊಬೈಲ್ ಆ್ಯಪ್ ಮೂಲಕವು ರಿಚಾರ್ಜ್ ಮಾಡಿಕೊಳ್ಳಬಹುದು
ದೇಶದ ಎರಡನೇ ಅತಿದೊಡ್ಡ ಮೆಟ್ರೋ ನೆಟ್ವರ್ಕ್ ಆಗಿ ಹೊರಹೊಮ್ಮಿದ ಬೆಂಗಳೂರು ನಮ್ಮ ಮೆಟ್ರೋ
ಬಹು ನಿರೀಕ್ಷಿತ ಕೆಆರ್ ಪುರಂ-ವೈಟ್ಫೀಲ್ಡ್ ಮೆಟ್ರೋ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 25ರಂದು ಉದ್ಘಾಟಿಸಿದ ಬಳಿಕ ಬೆಂಗಳೂರಿನ ನಮ್ಮ ಮೆಟ್ರೋ ದೇಶದ ಎರಡನೇ ಅತಿದೊಡ್ಡ ಮೆಟ್ರೋ ನೆಟ್ವರ್ಕ್ ಆಗಿ ಹೊರಹೊಮ್ಮಿದೆ. 63 ನಿಲ್ದಾಣಗಳೊಂದಿಗೆ 69.66 ಕಿ.ಮೀ ಕಾರ್ಯಾಚರಣೆ ನಡೆಸುತ್ತಿರುವ ನಮ್ಮ ಮೆಟ್ರೋ ದೆಹಲಿಯ ನಂತರದಲ್ಲಿ ದೇಶದ ಎರಡನೇ ಅತಿದೊಡ್ಡ ಮೆಟ್ರೋ ನಿಲ್ದಾಣವಾಗಿದೆ. ಪ್ರಧಾನಮಂತ್ರಿಯವರು ಉದ್ಘಾಟಿಸಿರುವ ಈ ನಿರ್ದಿಷ್ಟ ವಿಸ್ತರಣೆಯು ಬೆಂಗಳೂರಿನ ಪೂರ್ವ ಅಂಚನ್ನು ನೈಋತ್ಯ ಅಂಚಿಗೆ ಸೇರುತ್ತದೆ.
ಚಲ್ಲಘಟ್ಟದಿಂದ ವೈಟ್ಫೀಲ್ಡ್ವರೆಗಿನ ನೇರಳೆ ಮಾರ್ಗದ ಒಟ್ಟು ಉದ್ದವು ಸುಮಾರು 42.5 ಕಿಮೀ ಹೊಂದಿದ್ದು, ಇದು ಕೆಆರ್ ಪುರಂನಲ್ಲಿ (ಬ್ಲೂ ಲೈನ್) ಇಂಟರ್ಚೇಂಜ್ ಹೊಂದಿದೆ. ಎಂಜಿ ರಸ್ತೆಯಲ್ಲಿ (ನೇರಳೆ ಲೈನ್) ಮತ್ತು ಮೆಜೆಸ್ಟಿಕ್ನಲ್ಲಿ (ಹಸಿರು ಲೈನ್) ಇಂಟರ್ಚೇಂಜ್ ಹೊಂದಿದೆ. ಪ್ರಸ್ತುತ ಈ ಮಾರ್ಗವು ಕೆಂಗೇರಿಯಿಂದ ಬೈಯಪ್ಪನಹಳ್ಳಿಯವರೆಗೆ (ಸುಮಾರು 26 ಕಿಮೀ) ಒಟ್ಟು ಉದ್ದದ ಈಗ ಕೇವಲ 60% ಮಾತ್ರ ಕಾರ್ಯನಿರ್ವಹಿಸುತ್ತಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



