ಶ್ರೀನಿವಾಸಪುರ:ಪಂಚಾಯಿತಿ ವ್ಯಾಪ್ತಿಯ ನಿವೇಶನಕ್ಕೆ ಸಂಬಂದಪಟ್ಟಂತೆ ಇ-ಖಾತೆ ಮಾಡಿಕೊಡಲು ಗ್ರಾಮಸ್ಥನಿಂದ ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಎಸಿಬಿ ಪೋಲಿಸರ ಬಲೆಗೆ ಬಿದ್ದಿದ್ದಾನೆ.
ತಾಲೂಕಿನ ಲಕ್ಷ್ಮೀಪುರ ಪಂಚಾಯಿತಿಯ ವೆಂಕಟರಾಜು ಎನ್ನುವ ವ್ಯಕ್ತಿ ತನ್ನ ತಂದೆ ಮುನಿವೆಂಕಟಪ್ಪ ಮತ್ತು ಸುಶೀಲಮ್ಮ ತಾಯಿ ಹೆಸರಲ್ಲಿದ್ದ ಗ್ರಾಮದ ವ್ಯಾಪ್ತಿಯ ಕಾಲಿ ನಿವೇಶನಗಳ ಇ-ಖಾತೆ ಮಾಡಿಕೊಡುವ ಸಂಬಂದ ಮಾರ್ಚ ತಿಂಗಳಲ್ಲಿ ಅರ್ಜಿ ಸಲ್ಲಿಸಿದ್ದರು ಆದರೆ ಅರ್ಜಿಗೆ ಇದುವರಿಗೂ ಯಾವುದೇ ಸ್ವೀಕೃತಿ ಸಹ ನೀಡದೆ ಪಿಡಿಒ ಸತಾಯಿಸುತ್ತಿದ್ದು ಈ ಸಂಬಂದ ಅರ್ಜಿದಾರನ ತಂದೆ ಖುದ್ದು ಪಿಡಿಒ ಶಂಕರಪ್ಪ ಅವರನ್ನು ಭೇಟಿ ಮಾಡಿ ವಿಚಾರಿಸಿದಾಗ ಪಿಡಿಒ ಇ-ಖಾತ ಮಾಡಲು 15 ಸಾವಿರ ಡಿಮ್ಯಾಂಡ್ ಮಾಡಿದ್ದು ಇದಕ್ಕೆ ಅರ್ಜಿದಾರ ಮುನಿವೆಂಕಟಪ್ಪ ತಕ್ಷಣ ಸ್ಥಳದಲ್ಲಿಯೇ 2 ಸಾವಿರ ಹಣವನ್ನು ನೀಡಿರುತ್ತಾರೆ ಉಳಿದ ಹಣ 13 ಸಾವಿರ ತಂದು ಹಣ ತಂದುಕೊಡುವುದಾಗಿ ಹೇಳಿದ್ದು, ಈ ಬಗ್ಗೆ ಅರ್ಜಿದಾರ ಮುನಿವೆಂಕಟಪ್ಪನ ಮಗ ವೆಂಕಟ್ರಾಜು ಜುಲೈ 14 ರಂದು ಕೋಲಾರದ ಎಸಿಬಿ ಪೋಲಿಸರಿಗೆ ದೂರು ನೀಡಿರುತ್ತಾರೆ ಅದರಂತೆ ಉಳಿದ ಹಣ 13ಸಾವಿರವನ್ನು ಲಕ್ಷ್ಮೀಪುರಕ್ರಾಸನಲ್ಲಿರುವ ಮಯೂರಿ ಬಾರ್ ನಿಂದ ಲಕ್ಷ್ಮೀಪುರಕ್ಕೆ ಹೋಗುವ ದಾರಿ ಮದ್ಯ ಇಂದು ಮಂಗಳವಾರ ಪಿಡಿಒ ಶಂಕರಪ್ಪ ಅರ್ಜಿದಾರನಿಂದ ಪಡೆಯುತ್ತಿರುವಾಗ ಎಸಿಬಿ ಪೋಲಿಸರಿಗೆ ಸಿಕ್ಕಿ ಬಿದ್ದಿರುತ್ತಾರೆ.ಎಸಿಬಿ ಡಿವೈಎಸ್ಪಿ ಸುಧೀರ್ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ಪಿಡಿಒ ಶಂಕರಪ್ಪನನ್ನು ವಶಕ್ಕೆ ಪಡೆದಿರುತ್ತಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28