ಶ್ರೀನಿವಾಸಪುರ:ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪನವರು ತಾಲೂಕಿನ ನಂಬಿಹಳ್ಳಿ ಪಂಚಾಯಿತಿ ಭೇಟಿ ಸಂದರ್ಭದಲ್ಲಿ ಮೊಬೈಲ್ ಸ್ವೀಚ್ ಆಫ್ ಮಾಡಿ ಬೇಜವಬ್ದಾರಿಯಿಂದ ನಾಪತ್ತೆಯಾಗಿದ್ದ ನಂಬಿಹಳ್ಳಿ ಪಿಡಿಓ ಮಂಜುನಾಥರೆಡ್ಡಿಯನ್ನು ಜಿಲ್ಲಾಪಂಚಾಯಿತಿ ಸಿಇಒ ಸಸ್ಪೆಂಡ್ ಮಾಡಿರುತ್ತಾರೆ.
ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪನವರು ಶ್ರೀನಿವಾಸಪುರ ಭೇಟಿ ಸಂದರ್ಭದಲ್ಲಿ ಅಧಿಕಾರಿಗಳ ಸಭೆ ನಡೆಸಿ ವಿಶೇಷವಾಗಿ ಪಂಚಾಯಿತಿ ಕಚೇರಿಗಳಿಗೆ ಭೇಟಿ ನೀಡುವುದಾಗಿ ತಿಳಿಸಿದ್ದರು ಅದರಂತೆ ನಂಬಿಹಳ್ಳಿ ಪಂಚಾಯಿತಿಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪನವರು ಭೇಟಿ ನೀಡಿದಾಗ, ನಂಬಿಹಳ್ಳಿ ಪಿಡಿಓ ಮಂಜುನಾಥರೆಡ್ಡಿ ಪಂಚಾಯಿತಿ ಕಚೇರಿಯಲ್ಲಿ ಇಲ್ಲದೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದರು,ಇದಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪನವರು ಕೆಂಡಾಮಂಡಲರಾಗಿ ಸಭೆಯಲ್ಲಿ ಭಾಗವಹಿಸಿದ್ದ ಪಿಡಿಒ ಮಂಜುನಾಥರೆಡ್ಡಿ ನಂತರ ಕಚೇರಿಗೆ ಆಗಮಿಸದೆ ನಾಪತ್ತೆಯಾಗಿದ್ದು ಇದನ್ನು ತೀವ್ರವಾಗಿ ಪರಿಗಣಿಸಿದ ಉಪಲೋಕಾಯುಕ್ತ ನ್ಯಾಯಮೂರ್ತಿಗಳು ಪಿಡಿಒ ಮಂಜುನಾಥರೆಡ್ಡಿ ಯನ್ನು ತಕ್ಷಣವೇ ಸಸ್ಪೆಂಡ್ ಮಾಡುವಂತೆ ಸ್ಥಳದಲ್ಲಿದ್ದ ತಾಲೂಕು ಪಂಚಾಯಿತಿ ಇಒ ಶಿವಕುಮಾರಿ ಅವರಿಗೆ ಸೂಚಿಸಿದರು.
ಈ ಹಿನ್ನಲೆಯಲ್ಲಿ ತಾಲೂಕು ಪಂಚಾಯಿತಿ ಇಒ ಶಿವಕುಮಾರಿ ಅವರು ಕೋಲಾರ ಜಿಲ್ಲಾಪಂಚಾಯಿತಿ ಸಿಇಒ ಅವರಿಗೆ ಪಿಡಿಒ ಮೇಲಿನ ಆರೋಪ ವಿವರಿಸಿ ಕರ್ತವ್ಯ ಲೋಪದ ಆರೋಪದಡಿ ಉಪಲೋಕಾಯುಕ್ತ ನ್ಯಾಯಮೂರ್ತಿಗಳ ಆದೇಶದಂತೆ ಅಮಾನತ್ತು ಮಾಡಲು ಶಿಫಾರಸ್ಸು ಮಾಡಿದ್ದರು ಅದರಂತೆ ಕೋಲಾರ ಜಿಲ್ಲಾಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕರ್ನಾಟಕ ನಾಗರೀಕ ಸೇವಾ(ವರ್ಗೀಕರಣ ನಿಯಂತ್ರಣ ಮತ್ತು ಅಪೀಲು) ನಿಯಮ 1957 ಅಡಿಯಲ್ಲಿ ಪಿಡಿಒ ಮಂಜುನಾಥರೆಡ್ಡಿಯನ್ನು ಅಮಾನತ್ತು ಮಾಡಿರುತ್ತಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



