ಶ್ರೀನಿವಾಸಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಕೃಷಿ ಕಾಯ್ದೆಗಳು ಮತ್ತು ಕೃಷಿ ಉತ್ಪನ್ನಗಳ ಮೇಲಿನ ಜಿಎಸ್ಟಿ ಹಾಗು ಜನ ಸಾಮಾನ್ಯರು ಬಳಸುವ ದಿನ ನಿತ್ಯದ ವಸ್ತುಗಳ ಮೇಲೆನ ಜಿಎಸ್ಟಿ ಹಿಂಪಡೆಯ ಬೇಕು ಎಂದು ರೈತ ಹಾಗು ಕಾರ್ಮಿಕ ಮುಖಂಡ ಪಾತಕೋಟ ನವೀನ್ ಕುಮಾರ್ ಅಗ್ರಹಿಸಿದರು.ಅವರು ಮಾತನಾಡಿ ರೈತ ವಿರೋಧಿ ಕೃಷಿ ಕಾಯ್ದೆಗಳು ಮತ್ತು ಕೃಷಿ ಉತ್ಪನ್ನಗಳ ಮೇಲಿನ ಜಿಎಸ್ಟಿ ಹಿಂಪಡೆಯಬೇಕು ಎಂದು ಉತ್ತಾಯಿಸಿ ಆಂದೋಲನ ಪ್ರಾರಂಭಿಸಿದ್ದು ಅದರಂತೆ ತಾಲ್ಲೂಕಿನ ನೆಲವಂಕಿ ಹೋಬಳಿಯ ಲಕ್ಷ್ಮೀಪುರದಲ್ಲಿ ಸಮಾವೇಶ ಆಯೋಜಿಸಲಾಗಿದೆ ಎಂದರು.
ರೈತ ವಿರೋದಿ ಆಡಳಿತ ನಡೆಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿತಿಗಳಿಂದ ರೈತರು ಜನಸಾಮಾನ್ಯರು ನರಳುವಂತಾಗಿದೆ ಎಂದು ದೂರಿದರು ಜನಸಾಮನ್ಯರ ಅನಕೂಲಕ್ಕಾಗಿ ಯಾವುದೆ ಅಜೆಂಡ ಇಲ್ಲದೆ ಸರ್ಕಾರಗಳನ್ನು ನಡೆಸುತ್ತಿದ್ದಾರೆ ಮಿತಿಮೀರಿದ ತೆರೆಗಳನ್ನು ವಿಧಿಸುತ್ತಿರುವುದರಿಂದ ರಾಜ್ಯ ಹಾಗು ಕೇಂದ್ರ ಸರ್ಕಾರಗಳ ವಿರುದ್ದ ಜನಾಕ್ರೋಶ ವ್ಯಕ್ತವಾಗುತ್ತಿದೆ ಎಂದರು.
ಮುಖಂಡ ವೀರಪ್ಪರೆಡ್ಡಿ ಮಾತನಾಡಿ ಕೇಂದ್ರ ಸರ್ಕಾರ ಕೃಷಿ ಸಾಂಪ್ರದಾಯಿಕ ಪರಿಕಲ್ಪನೆಗೆ ಕೊಳ್ಳಿ ಇಟ್ಟಿದೆ ಎಂದು ಆರೋಪಿಸಿದರು ನೆಲವಂಕಿ ಹೋಬಳಿಯ ಗೌರವಾಧ್ಯಕ್ಷ ಜಯರಾಮರೆಡ್ಡಿ ಅಧ್ಯಕ್ಷ ಪಿಜಿ ನಾರಾಯಣಸ್ವಾಮಿ ಕಾರ್ಯದರ್ಶಿಸೀನಪ್ಪ ಉಪಾಧ್ಯಕ್ಷ ರಾಜಾರೆಡ್ಡಿ ಮತ್ತು ನಾಗರಾಜ ಶಾಸ್ತ್ರಿ ಸಹ ಕಾರ್ಯದರ್ಶಿ ವೆಂಕಟಸ್ವಾಮಿರೆಡ್ಡಿ ಮತ್ತು ಗಂಗಪ್ಪ ಸದಸ್ಯರಾದ ಬಿವಿ ವೆಂಕಟೇಶ್ ಆರ್ ವೆಂಕಟರವಣಪ್ಪ ಓಬಣ್ಣ ನಾಗರಾಜು ಕೃಷ್ಣಮೂರ್ತಿ ನಾರಾಯಣಸ್ವಾಮಿ ಪಿಎಂ ನಾಗರಾಜ ವೆಂಕಟರೆಡ್ಡಿ ಕಿವಿ ಬಂಗಾರಪ್ಪ ವೆಂಕಟರಾಮಪ್ಪ ತಾಲೂಕು ಮುಖಂಡರಾದ ಆರ್ ವೆಂಕಟೇಶ್ ಸೈಯದ್ ಫಾರೂಕ್ ಮುಂತಾದವ್ರು ಇದ್ದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



