ಬೆಂಗಳೂರು:ಬೆಂಗಳೂರು ನಗರದಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ) ಮಾಲಿಕ ಎಸಗಿರುವ ಮೃಗಿಯ ಕೃತ್ಯ ಬೆಳಕಿಗೆ ಬಂದಿದೆ. ಸೋಲದೇವನಹಳ್ಳಿಯ ಖಾಸಗಿ ಕಾಲೇಜಿನ ಕೇರಳದ ಯುವತಿ 10 ದಿನಗಳ ಹಿಂದೆಯಷ್ಟೇ ಆರೋಪಿ ಅಶ್ರಫ್ ಒಡೆತನದ ಪಿ.ಜಿಗೆ ದಾಖಲಾಗಿದ್ದಳು.ಪಿಜಿ ಮಾಲಿಕ ಅಶ್ರಫ್ ಶುಕ್ರವಾರ ರಾತ್ರಿ ನನ್ನನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯಿದು ದೌರ್ಜನ್ಯವೆಸಗಿದ್ದ. ನಂತರ ನನ್ನನ್ನು ಪೇಯಿಂಗ್ ಗೆಸ್ಟ್ಗೆ ವಾಪಸ್ ಕರೆತಂದು ಬಿಟ್ಟಿದ್ದ ಎಂದು ಸಂತ್ರಸ್ತೆ ಪೋಲಿಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾಳೆ.
ಕೃತ್ಯಕ್ಕೂ ಮೊದಲು ಹಲ್ಲೆ ಮಾಡಿದ್ದ ಅತ್ಯಾಚಾರ ಎಸಗಲು ಪ್ರಯತ್ನಿಸಿದಾಗ, ವಿರೋಧಿಸಿದ್ದಕ್ಕೆ ಮತ್ತೆ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಯುವತಿ ದೂರಿದ್ದಾಳೆ.
ಯುವತಿ ನೀಡಿರುವ ದೂರಿನ ಪ್ರಕಾರ, ಪ್ರಕರಣ ದಾಖಲಿಸಿಕೊಂಡ ಸೋಲದೇವನಹಳ್ಳಿ ಪೊಲೀಸರು ಆರೋಪಿ, ಪಿಜಿ ಮಾಲೀಕ ಅಶ್ರಫ್ ನನ್ನು ಇಂದು (ಭಾನುವಾರ) ಬಂಧಿಸಿದ್ದಾರೆ. ಪ್ರಕರಣದ ಕುರಿತು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಿಂದ ಆಘಾತಕ್ಕೊಳಗಾಗಿದ್ದ ಸಂತ್ರಸ್ತೆ ಸ್ನೇಹಿತರ ಸಹಾಯದಿಂದ ಸೋಲದೇವನಹಳ್ಳಿ ಠಾಣೆಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



