ನ್ಯೂಜ್ ಡೆಸ್ಕ್:ತೆಲಂಗಾಣ ರಾಜ್ಯದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಆರೋಗ್ಯವಂತರಾಗಿ ಬದುಕಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಸಿಎಂ ರೇವಂತ್ ಪ್ರಧಾನಿಗೆ ಧನ್ಯವಾದ ತಿಳಿಸಿದ್ದಾರೆ.
ವಿದ್ಯಾರ್ಥಿ ದಸೆಯಿಂದ ಮುಖ್ಯಮಂತ್ರಿ ಸ್ಥಾನಕ್ಕೆ
ತೆಲಂಗಾಣದ ವಿಭಜಿತ ಮಹಬೂಬ್ ನಗರ ಜಿಲ್ಲೆಯಲ್ಲಿ ಸಿಎಂ ರೇವಂತ್ ರೆಡ್ಡಿ ಕಾಲೇಜು ದಿನಗಳಲ್ಲಿಯೇ ನಾಯಕರಾಗಿ ಹೊರಹೊಮ್ಮಿದ್ದರು. ನಂತರದಲ್ಲಿ ರಾಜಕೀಯ ಪ್ರವೇಶಿಸಿದ ಅವರಿಗೆ 2006 ರಲ್ಲಿ ಜಿಲ್ಲಾಪಂಚಾಯಿತಿ ಸ್ಥಾನಕ್ಕೆ ಸ್ಪರ್ದಿಸಲು ಯಾವ ಪಕ್ಷದವರು ಟಿಕೆಟ್ ನೀಡದ ಹಿನ್ನಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ZPTC ಸ್ಪರ್ದಿಸಿ ವಿಜೇತರಾದರು ನಂತರ 2007 ರಲ್ಲಿ MLC ಯಾಗಿ ಸಂಚಲನಾತ್ಮಕವಾಗಿ ಗೆಲವು ಸಾಧಿಸಿದರು ನಂತರ, ಅವರು ಚಂದ್ರಬಾಬು ನಾಯಕತ್ವ ಮೆಚ್ಚಿ ತೆಲಗುದೇಶಂ ಪಕ್ಷಕ್ಕೆ ಸೇರ್ಪಡೆಯಾದರು ಮತ್ತು ತೆಲಂಗಾಣ ಪಕ್ಷದ ಘಟಕದ ಅಧ್ಯಕ್ಷರಾದರು. ನಂತರದ ರಾಜಕೀಯ ಬೆಳವಣಿಗೆಯಲ್ಲಿ ತೆಲಂಗಾಣ ರಾಜ್ಯ ಉದ್ಭವಾದ ನಂತರ ತಮ್ಮ ರಾಜಕೀಯ ಅಸ್ತಿತ್ವ ಉಳಸಿಕೊಳ್ಳಲು ಅವರು ಕಾಂಗ್ರೆಸ್ ಸೇರಿ ಟಿಪಿಸಿಸಿ ಅಧ್ಯಕ್ಷ ಸ್ಥಾನ ಪಡೆದರು. ತಮ್ಮ ನಿರಂತರ ರಾಜಕೀಯ ಪ್ರಯಾಣದಲ್ಲಿ ನೇರವಾಗಿ ಮಾತನಾಡಿದ್ದೆ ಹೆಚ್ಚು ಅವರ ನೇರಭಾಷಣಗಳಿಂದಲೆ ಕೆಸಿಆರ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ಸಿಎಂ ಆಗಿರುವ ರೇವಂತ್ ರೆಡ್ಡಿ ಚುನಾವಣೆಯಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸುತ್ತಾ ಮುನ್ನಡೆಯುತ್ತಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26