ನ್ಯೂಜ್ ಡೆಸ್ಕ್:ತೆಲಂಗಾಣ ರಾಜ್ಯದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಆರೋಗ್ಯವಂತರಾಗಿ ಬದುಕಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಸಿಎಂ ರೇವಂತ್ ಪ್ರಧಾನಿಗೆ ಧನ್ಯವಾದ ತಿಳಿಸಿದ್ದಾರೆ.
ವಿದ್ಯಾರ್ಥಿ ದಸೆಯಿಂದ ಮುಖ್ಯಮಂತ್ರಿ ಸ್ಥಾನಕ್ಕೆ
ತೆಲಂಗಾಣದ ವಿಭಜಿತ ಮಹಬೂಬ್ ನಗರ ಜಿಲ್ಲೆಯಲ್ಲಿ ಸಿಎಂ ರೇವಂತ್ ರೆಡ್ಡಿ ಕಾಲೇಜು ದಿನಗಳಲ್ಲಿಯೇ ನಾಯಕರಾಗಿ ಹೊರಹೊಮ್ಮಿದ್ದರು. ನಂತರದಲ್ಲಿ ರಾಜಕೀಯ ಪ್ರವೇಶಿಸಿದ ಅವರಿಗೆ 2006 ರಲ್ಲಿ ಜಿಲ್ಲಾಪಂಚಾಯಿತಿ ಸ್ಥಾನಕ್ಕೆ ಸ್ಪರ್ದಿಸಲು ಯಾವ ಪಕ್ಷದವರು ಟಿಕೆಟ್ ನೀಡದ ಹಿನ್ನಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ZPTC ಸ್ಪರ್ದಿಸಿ ವಿಜೇತರಾದರು ನಂತರ 2007 ರಲ್ಲಿ MLC ಯಾಗಿ ಸಂಚಲನಾತ್ಮಕವಾಗಿ ಗೆಲವು ಸಾಧಿಸಿದರು ನಂತರ, ಅವರು ಚಂದ್ರಬಾಬು ನಾಯಕತ್ವ ಮೆಚ್ಚಿ ತೆಲಗುದೇಶಂ ಪಕ್ಷಕ್ಕೆ ಸೇರ್ಪಡೆಯಾದರು ಮತ್ತು ತೆಲಂಗಾಣ ಪಕ್ಷದ ಘಟಕದ ಅಧ್ಯಕ್ಷರಾದರು. ನಂತರದ ರಾಜಕೀಯ ಬೆಳವಣಿಗೆಯಲ್ಲಿ ತೆಲಂಗಾಣ ರಾಜ್ಯ ಉದ್ಭವಾದ ನಂತರ ತಮ್ಮ ರಾಜಕೀಯ ಅಸ್ತಿತ್ವ ಉಳಸಿಕೊಳ್ಳಲು ಅವರು ಕಾಂಗ್ರೆಸ್ ಸೇರಿ ಟಿಪಿಸಿಸಿ ಅಧ್ಯಕ್ಷ ಸ್ಥಾನ ಪಡೆದರು. ತಮ್ಮ ನಿರಂತರ ರಾಜಕೀಯ ಪ್ರಯಾಣದಲ್ಲಿ ನೇರವಾಗಿ ಮಾತನಾಡಿದ್ದೆ ಹೆಚ್ಚು ಅವರ ನೇರಭಾಷಣಗಳಿಂದಲೆ ಕೆಸಿಆರ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ಸಿಎಂ ಆಗಿರುವ ರೇವಂತ್ ರೆಡ್ಡಿ ಚುನಾವಣೆಯಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸುತ್ತಾ ಮುನ್ನಡೆಯುತ್ತಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



