ಶ್ರೀನಿವಾಸಪುರ:ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮ ಇದೊಂದು ಉತ್ತಮ ಕಾರ್ಯಕ್ರಮವಾಗಿದೆ ಎಂದು ಶಾಸಕ ವೆಂಕಟಶಿವಾರೆಡ್ಡಿ ಹೇಳಿದರು ಅವರು ಶ್ರೀನಿವಾಸಪುರ ಪಟ್ಟಣದ ತ್ಯಾಗರಾಜ ಬಡಾವಣೆಯಲ್ಲಿರುವಂತ ಕರ್ನಾಟಕ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ(ಬೈರೆಡ್ಡಿ ಸ್ಕೂಲ್)ಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ,ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಹಾಗು ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮತ್ತು ಕೆ ಎಂ ಎಫ್ ಇವರ ಸಹಯೋಗದಲ್ಲಿ ಮದ್ಯಾಹ್ನ ಉಪಹಾರ ಯೋಜನೆಯಡಿ ತಾಲ್ಲೂಕು ಹಂತದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ 1 ರಿಂದ 10 ನೇ ತರಗತಿ ಎಲ್ಲಾ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರವಾಗಿ ಬಿಸಿ ಹಾಲಿನೊಂದಿಗೆ ಮಿಶ್ರಣಗೊಳಿಸಿ ಶಾಲಾ ಮಕ್ಕಳಿಗೆ ವಿತರಣೆ ಮಾಡುವಂತ ಕಾರ್ಯಕ್ರಮವನ್ನು ಸಧ್ಯ ಈಗ ವಾರಕ್ಕೆ ಮೂರು ದಿನ ನೀಡುತ್ತಿದ್ದು ಅದನ್ನು ವಾರದ 6 ದಿನಗಳು ನೀಡಿದರೆ ಒಳ್ಳೆಯದು ಎಂದು ಹೇಳಿದ ಅವರು ಸರ್ಕಾರಿ ಶಾಲೆಗಳ ಮಕ್ಕಳು ಯಾವುದೇ ರೀತಿಯ ಆಪೌಷ್ಠಿಕತೆಯಿಂದ ಬಳಲಬಾರದು ಎಂದು ಕೇಂದ್ರ ಸರ್ಕಾರ ಅತುತ್ಯಮವಾದ ಕಾರ್ಯಕ್ರಮ ರೂಪಿಸಿದೆ ಎಂದರು.
ಈ ಸಂದರ್ಭದಲ್ಲಿ ಪಿಎಂ ಪೋಷಣ್ ರಾಗಿ ಹೆಲ್ತ್ ಮಿಕ್ಸ್ ಹಾಲು ವಿತರಣೆ ಮಾಡಲಾಯಿತು,ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮತ್ತು ಕೆ ಎಂ ಎಫ್ ಸಮಸ್ಥೆಗೆ ಶಾಸಕ ಧನ್ಯವಾದ ತಿಳಿಸಿದರು.ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಇಒ ಶಿವಕುಮಾರಿ,ಶಾಲ ಅಭಿವೃದ್ಧಿ ಸಮಿತಿ ಅಧ್ಯಕ್ಷ ಆನಂದರೆಡ್ಡಿ, ಯುವ ಮುಖಂಡ ಕಂಬಾಲಪಲ್ಲಿ ಶ್ರೀನಿವಾಸರೆಡ್ಡಿ,ಶಾಲೆಯ ಮುಖ್ಯ ಶಿಕ್ಷಕ ಬೈರೇಗೌಡ,ಶ್ರೀನಿವಾಸ್ ಸೇರಿದಂತೆ ಮುಂತಾದವರು ಇದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26