ಶ್ರೀನಿವಾಸಪುರ:ಹಣ ಪಣಕ್ಕಿಟ್ಟು ಇಸ್ಪೀಟ್ ಆಡುತ್ತಿದ್ದ ಗುಂಪಿನ ಮೇಲೆ ಪೋಲಿಸರು ದಾಳಿ ನಡೆಸಿ ಇಸ್ಪೀಟ್ ಆಡುತ್ತಿದ್ದವರನ್ನು ಬಂಧಿಸಿ 4 ದ್ವಿಚಕ್ರ ವಾಹನಗಳು ಮತ್ತು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಶ್ರೀನಿವಾಸಪುರ ತಾಲ್ಲೂಕಿನ ಅಲಂಬಗಿರಿ ಗ್ರಾಮದ ಸಮೀಪ ಮಾವಿನ ತೋಟದಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದವರ ಮೇಲೆ ಮುಳಬಾಗಿಲು ಡಿ.ವೈ.ಎಸ್.ಪಿ ನಂದಕುಮಾರ್ ನೇತೃತ್ವದಲ್ಲಿ ಶ್ರೀನಿವಾಸಪುರ ಪೋಲಿಸ್ ಸರ್ಕಲ್ ಇನ್ಸಪೇಕ್ಟರ್ ಮೊಹಮದ್ ಗೊರವನಕೊಳ್ಳ,ಮುಳಬಾಗಿಲು ಗ್ರಾಮಾಂತರ ಪಿ.ಎಸ್.ಐ ವಿಠ್ಠಲ್ ತಳವಾರ್.ರಾಯಲ್ಪಾಡ್ ಪಿ.ಎಸ್.ಐ ಯೋಗಿಶ್ ಕುಮಾರ್ ತಂಡ ದಾಳಿ ನಡೆಸಿ ನೇತೃತ್ವದಲ್ಲಿ ದಾಳಿ ಮಾಡಿದ್ದು ಏಳು ಮಂದಿ ಇಸ್ಪೀಟ್ ಆಡುತ್ತಿದ್ದವರನ್ನು ಬಂಧಿಸಿರುತ್ತಾರೆ ಇಸ್ಪೀಟ್ ಆಟದಲ್ಲಿ ಪಣಕ್ಕಿಟ್ಟಿದ್ದ 42200/- ಹಣ ಹಾಗು ಅಲ್ಲಿದ್ದ 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂದಿತ ಆರೋಪಿಗಳಲ್ಲಿ ಚಿಂತಾಮಣಿ,ಶ್ರೀನಿವಾಸಪುರ ತಾಲೂಕಿನವರು ಇದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.
ತಾಲೂಕಿನಲ್ಲಿ ಇತ್ತಿಚಿಗೆ ಇಸ್ಪೀಟ್ ದಂದೆ ಎಗ್ಗು ಸಿಗ್ಗಿಲ್ಲದೆ ಎಲ್ಲಂದರಲ್ಲಿ ನಡೆಯುತ್ತಿದೆ ಎಂದು ಸಾರ್ವಜನಿಕರು ತೀವ್ರಧಾಟಿಯಲ್ಲಿ ಆರೋಪಿಸುತ್ತಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



