ಶ್ರೀನಿವಾಸಪುರ:ಹಣ ಪಣಕ್ಕಿಟ್ಟು ಇಸ್ಪೀಟ್ ಆಡುತ್ತಿದ್ದ ಗುಂಪಿನ ಮೇಲೆ ಪೋಲಿಸರು ದಾಳಿ ನಡೆಸಿ ಇಸ್ಪೀಟ್ ಆಡುತ್ತಿದ್ದವರನ್ನು ಬಂಧಿಸಿ 4 ದ್ವಿಚಕ್ರ ವಾಹನಗಳು ಮತ್ತು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಶ್ರೀನಿವಾಸಪುರ ತಾಲ್ಲೂಕಿನ ಅಲಂಬಗಿರಿ ಗ್ರಾಮದ ಸಮೀಪ ಮಾವಿನ ತೋಟದಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದವರ ಮೇಲೆ ಮುಳಬಾಗಿಲು ಡಿ.ವೈ.ಎಸ್.ಪಿ ನಂದಕುಮಾರ್ ನೇತೃತ್ವದಲ್ಲಿ ಶ್ರೀನಿವಾಸಪುರ ಪೋಲಿಸ್ ಸರ್ಕಲ್ ಇನ್ಸಪೇಕ್ಟರ್ ಮೊಹಮದ್ ಗೊರವನಕೊಳ್ಳ,ಮುಳಬಾಗಿಲು ಗ್ರಾಮಾಂತರ ಪಿ.ಎಸ್.ಐ ವಿಠ್ಠಲ್ ತಳವಾರ್.ರಾಯಲ್ಪಾಡ್ ಪಿ.ಎಸ್.ಐ ಯೋಗಿಶ್ ಕುಮಾರ್ ತಂಡ ದಾಳಿ ನಡೆಸಿ ನೇತೃತ್ವದಲ್ಲಿ ದಾಳಿ ಮಾಡಿದ್ದು ಏಳು ಮಂದಿ ಇಸ್ಪೀಟ್ ಆಡುತ್ತಿದ್ದವರನ್ನು ಬಂಧಿಸಿರುತ್ತಾರೆ ಇಸ್ಪೀಟ್ ಆಟದಲ್ಲಿ ಪಣಕ್ಕಿಟ್ಟಿದ್ದ 42200/- ಹಣ ಹಾಗು ಅಲ್ಲಿದ್ದ 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂದಿತ ಆರೋಪಿಗಳಲ್ಲಿ ಚಿಂತಾಮಣಿ,ಶ್ರೀನಿವಾಸಪುರ ತಾಲೂಕಿನವರು ಇದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.
ತಾಲೂಕಿನಲ್ಲಿ ಇತ್ತಿಚಿಗೆ ಇಸ್ಪೀಟ್ ದಂದೆ ಎಗ್ಗು ಸಿಗ್ಗಿಲ್ಲದೆ ಎಲ್ಲಂದರಲ್ಲಿ ನಡೆಯುತ್ತಿದೆ ಎಂದು ಸಾರ್ವಜನಿಕರು ತೀವ್ರಧಾಟಿಯಲ್ಲಿ ಆರೋಪಿಸುತ್ತಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Sunday, June 15