ಶ್ರೀನಿವಾಸಪುರ:ಕೋಲಾರ ಜಿಲ್ಲೆಯಲ್ಲಿ ಇತ್ತಿಚಿಗೆ ಹೆಚ್ಚುತ್ತಿರುವ ಕ್ರೈಮ್ ಕುರಿತಂತೆ ಕೋಲಾರ ಜಿಲ್ಲಾ ಪೊಲೀಸರು ಎಚ್ಚೆತ್ತುಕೊಂಡಂತಿದೆ ಇತ್ತಿಚಿಗೆ ನಡೆದಂತ ನಾಲ್ಕೈದು ಕೊಲೆ ಕೆಸುಗಳ ವಿಚಾರವಾಗಿ ಕೋಲಾರ ಜಿಲ್ಲಾ ಪೋಲಿಸ್ ಇಲಾಖೆ ವಿರುದ್ದ ಸಾರ್ವಜನಿಕರಿಂದ ತೀವ್ರ ವಿಮರ್ಶೆಗಳು ಕೇಳಿ ಬಂದ ಹಿನ್ನಲೆಯಲ್ಲಿ ಪೋಲಿಸ್ ಅಧಿಕಾರಿಗಳು ಸಡನ್ ಆಗಿ ಅಲರ್ಟ್ ಆಗಿದ್ದಾರೆ ಪೋಕರಿಗಳು ಪಟಾಲಂಗಳು ಕೂರುವ ಅಡ್ದೆಗಳ ಮೇಲೆ ಏಕಾಏಕಿ ದಾಳಿ ಮಾಡಿರುವ ಪೋಲಿಸರು ಬೀಡಾಡಿ ಪೋಕರಿಗಳಿಗೆ ತಕ್ಕ ಪಾಠಾ ಕಲಿಸಿದ್ದಾರೆ ಇಂದು ಶ್ರೀನಿವಾಸಪುರದ ಹಳೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಕ್ಕೆ ಜೀಪ್ ನುಗ್ಗಿಸಿದ ಪೋಲಿಸರು ನಂದಿನಿ ಪಾರ್ಲರ್ ಹಿಂಬಾಗದಲ್ಲಿ ಅರಾಮಾಗಿ ಸಿಗರೇಟ್ ಹೊಡೆಯುತ್ತಿದ್ದ ಬಿಲ್ಡ್ ಪ ಕೊಡುತ್ತ ಕೂತು ಹರಟೆ ಹೊಡೆಯುತ್ತಿದ್ದ ಕಾಲೇಜು ಹುಡುಗರಿಗೆ ಬೆತ್ತ ಬೀಸಿ ಅಲ್ಲಿಂದ ಓಡಿಸಿದ್ದಾರೆ ಬಾಲಕಿಯರ ಕಾಲೇಜು ಆವರಣದಲ್ಲಿ ಗುಂಪುಗಳು ಕಟ್ಟಿಕೊಂಡು ಅಡ್ಡಾಡುತ್ತಿದ್ದ ಯುವಕರಿಗೆ ಇನ್ನೊಮ್ಮೆ ಇತ್ತ ಬರಬಾರದು ಎಂದು ಎಚ್ಚರಿಸಿ ಕಳಿಸಿದ್ದಾರೆ.
ಶ್ರೀನಿವಾಸಪುರ ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸಪೇಕ್ಟರ್ ಗಳಾದ ಜೈರಾಮ್ ಹಾಗೂ ನಂಜುಂಡಪ್ಪ ರವರು ಬಾಲಕೀಯರ ಕಾಲೇಜಿಗೆ ಹೋಗಿ ಹೆಣ್ಮಕ್ಕಳಿಗೆ ಧೈರ್ಯ ತುಂಬಿದ್ದಾರೆ ಆತಂಕವಿಲ್ಲದೆ ಕಾಲೇಜುಗಳಿಗೆ ಬಂದು ವಿದ್ಯಾಭ್ಯಾಸವನ್ನು ಮಾಡಿ ಹೆತ್ತವರಿಗೆ ಗೌರವ ತರುವ ನಿಟ್ಟಿನಲ್ಲಿ ಕಷ್ಟಪಟ್ಟು ಓದುವ ಮೂಲಕ ಉತ್ತಮ ಸಾಧನೆ ಮಾಡಿ ಪುಂಡು ಪೋಕರಿಗಳಿಗೆ ಹೆದರಬೇಡಿ ನಿಮಿಗ್ಯಾರಿಗಾದರು ತೊಂದರೆ ಆದರೆ ನೇರವಾಗಿ ಪೋಲಿಸ್ ಅಧಿಕಾರಿಗಳಿಗೆ ದೂರು ನೀಡುವಂತೆ ಹೇಳಿದರು.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14